ಸುರಪುರ: ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಸುರಪುರ ಮತ್ತು ಹುಣಸಗಿ ತಾಲೂಕಿನ ಕೊರೊನಾ ಸೊಂಕಿತರಿಗೆ ನೆರವಾಗಲು ಶಾಸಕ ನರಸಿಂಹ ನಾಯಕ (ರಾಜುಗೌಡ) ೫೦ ಆಕ್ಸಿಜನ್ ಮಷಿನ್ ನೀಡಿದ್ದಕ್ಕೆ ತಾಲೂಕು ಆರೋಗ್ಯ ಇಲಾಖೆಯಿಂದ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ತಾಲೂಕು ಆರೋಗ್ಯಾಧಿಕಾರಿ ಡಾ: ಆರ್.ವಿ.ನಾಯಕ ಅವರು ಪತ್ರಿಕಾ ಹೇಳಿಕೆ ನೀಡಿದ್ದು, ಮಾನ್ಯ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರು ಸುರಪುರ ತಾಲೂಕು ಆಸ್ಪತ್ರೆಯ ಕೋವಿಡ್ ಆಸ್ಪತ್ರೆಗೆ ೨೦ ಆಕ್ಸಿಜನ್ ಕಾನ್ಸಂಟ್ರೇಟರ್ (ಆಮ್ಲಜನಕ ಸಾಂದ್ರತೆ) ಮತ್ತು ಹುಣಸಗಿ ಆರೋಗ್ಯ ಕೇಂದ್ರಕ್ಕೆ ೧೫ ಹಾಗು ಪ್ರಾಥಮಿಕ ಆರೋಗ್ಯ ಕೇಂದ್ರ ಕೊಡೇಕಲ್ಗೆ ೧೫ ಹೀಗೆ ಒಟ್ಟು ೫೦ ಆಕ್ಸಿಜನ್ ಕಾನ್ಸಂಟ್ರೇಟರ್ ತಮ್ಮ ಸ್ವಂತ ಹಣದಲ್ಲಿ ನೀಡಿರುವ ಶಾಸಕ ನರಸಿಂಹ ನಾಯಕ (ರಾಜುಗೌಡ) ಅವರಿಗೆ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ, ಡಾ: ಓಂಪ್ರಕಾಶ ಅಂಬುರೆ,ಡಾ:ಹರ್ಷವರ್ಧನ ರಫಗಾರ್ ಹಾಗು ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಂದ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.