ಸುರಪುರ: ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಕುದುರೆ ಸಾಲವಡಗಿ ಗ್ರಾಮದಲ್ಲಿ ನಡೆದ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕಿಯರನ್ನು ಅತ್ಯಾಚಾರ ಮಾಡಿ ಕೊಲೆಗೈದ ಆರೋಪಿಗಳಿಗೆ ಗಲ್ಲುಶಿಕ್ಷೆ ನೀಡುವಂತೆ ಯಾದಗಿರಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗು ಕಲ್ಯಾಣ ಕರ್ನಾಟಕ ಮಾದಿಗರ ಸಂಘದ ವಿಭಾಗಿಯ ಅಧ್ಯಕ್ಷ ಭೀಮಾಶಂಕರ ಬಿಲ್ಲವ್ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಕೂಡಲೇ ಈ ಘಟನೆಯ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು ಮತ್ತು ನೊಂದ ಸಂತ್ರಸ್ತ ಕುಟುಂಬಕ್ಕೆ ಸರಕಾರ ೫೦ ಲಕ್ಷ ರೂಪಾಯಿ ಪರಿಹಾರ ನೀಡಬೇಕು ಮತ್ತು ಆ ಕುಟುಂಬದ ಸದಸ್ಯರಿಗೆ ಸರಕಾರಿ ನೌಕರಿ ನೀಡಬೇಕು ಅಲ್ಲದೆ ಆದಿಜಾಂಬವ ಅಭೀವೃಧ್ದಿ ನಿಗಮದಿಂದ ಭೂ ಒಡೆತನ ಯೋಜನೆಯಡಿಯಲ್ಲಿ ಪ್ರತಿ ಕುಟುಂಬಕ್ಕೆ ೫ ಎಕರೆ ಜಮೀನು ನೀಡಬೇಕು ಹಾಗು ಲಿಡ್ಕರ್ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಿಕೊಡಬೇಕು,ನೊಂದ ಕುಟುಂಬದ ಮಕ್ಕಳಿಗೆ ಶಿಕ್ಷಣ ಮತ್ತು ಸರಕಾರದ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಜೊತೆಗೆ ಅವರಿಗೆ ಭದ್ರತೆ ಒದಗಿಸಬೇಕೆಂದು ಸರಕಾರಕ್ಕೆ ಆಗ್ರಹಿಸಿದ್ದಾರೆ.