ಬಳ್ಳಾರಿ: ಲಾಕ್ಡೌನ್ನಿಂದ ಆರ್ಥಿಕ ಸಂಕಷ್ಟಕ್ಕೊಳಗಾಗಿ ಹಲವು ವಿದ್ಯಾರ್ಥಿಗಳು ಕಾಲೇಜು ಫೀಸು ಪಾವತಿ ಮಾಡಲು ಸಮಯಾವಕಾಶ ನೀಡಲು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ವತಿಯಿಂದ ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮತ್ತು ಸಿರುಗುಪ್ಪ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಲಾಕ್ಡೌನ್ನಲ್ಲಿ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ಪ್ರಾರಂಭಿಸಲಾಗಿದ್ದು, ಆದರೆ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಹಲವಾರು ವಿದ್ಯಾರ್ಥಿಗಳು ಕಾಲೇಜು ಶುಲ್ಕ ಪಾವತಿ ಮಾಡದಿರುವ ಕಾರಣ ಆನ್ಲೈನ್ ತರಗತಿಗೆ ಸೇರಿಸದೆ ವಿದ್ಯಾರ್ಥಿಗಳಿಗೆ ಒತ್ತಡ ಹೇರುತ್ತಿದೆ. ಇದರಿಂದ ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯದ ಬಗ್ಗೆ ಆತಂಕಕ್ಕೊಳಗಾಗಿದ್ದಾರೆ. ಹಾಗಾಗಿ ಇಲ್ಲಿನ ಆಡಳಿತ ವ್ಯವಸ್ಥೆ ಇದರ ಬಗ್ಗೆ ಗಮನಹರಿಸಿ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬಳ್ಳಾರಿ ಜಿಲ್ಲಾ ಜಂಟಿ ಕಾರ್ಯದರ್ಶಿ ಹಬೀಬ್ ಹಾಗೂ ಸಮಿತಿ ಸದಸ್ಯ ಇರ್ಫಾನ್ , ಮತ್ತಿತರರು ಉಪಸ್ಥಿತರಿದ್ದರು.