ಕಲಬುರಗಿ: ಸಹಕಾರ ಸಚಿವಾಲಯ ಸ್ಥಾಪಿಸಲು ತೆಗೆದುಕೊಂಡಿರುವ ಕ್ರಮ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಐತಿಹಾಸಿಕ ನಿರ್ಧಾರ ಎಂದು ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಂಬಾರಾಯ ಅಷ್ಠಗಿ ಬಣ್ಣಿಸಿದ್ದಾರೆ.
ಸಹಕಾರ ಆಂದೋಲನವನ್ನು ದೇಶದಾದ್ಯಂತ ಬಲಪಡಿಸುವ ನಿಟ್ಟಿನಲ್ಲಿ ನೂತನ ಸಚಿವಾಲಯವು ಕಾರ್ಯೋನ್ಮುಖವಾಗಲಿದೆ. ಸಹಕಾರ ಕ್ಷೇತ್ರಕ್ಕೆ ಪ್ರತ್ಯೇಕ ಆಡಳಿತಾತ್ಮಕ, ಕಾನೂನು ಮತ್ತು ನೀತಿ ಚೌಕಟ್ಟನ್ನು ರೂಪಿಸಲಿದೆ. ಇದರಿಂದ ದೇಶದ ಸಹಕಾರ ಕ್ಷೇತ್ರದಲ್ಲಿ ಮಹತ್ವದ ಪ್ರಗತಿಯಾಗಲಿದೆ ಎಂದು ಅಂಬಾರಾಯ ಅಷ್ಠಗಿ ಹೇಳಿದರು.