ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಕೆಪಿಸಿಸಿ ಕಾರ್ಯಾಕಾರಿ ಅಧ್ಯಕ್ಷರಾದ ಈಶ್ವರ ಖಂಡ್ರೆ, ಚುನಾವಣೆ ಉಸ್ತುವಾರಿ ಹಾಗೂ ಮಾಜಿ ಸಚಿವರಾದ, ಯು.ಟಿ.ಖಾದರ್, ಪ್ರಿಯಾಂಕ್ ಖರ್ಗೆ, ಶಾಸಕಿ ಕನೀಜ್ ಫಾತೀಮಾ, ಮಾಜಿ ಸಚಿವರಾದ ಶರಣಪ್ರಕಾಶ್ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಗದೇವ ಗುತ್ತೇದಾರ, ಮಾಜಿ ಎಂ ಎಲ್ ಸಿ ಅಲ್ಲಮಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ, ಶರಣು ಮೋದಿ ಅವರು ಇಂದು ಕಲಬುರಗಿಯ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬಿಡುಗಡೆ ಮಾಡಿದರು.
ಸದರಿ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಕಲಬುರಗಿ ನಗರಕ್ಕೆ ಮಾಡಿರುವ ಜನಪರ ಯೋಜನೆಗಳ ಪಟ್ಟಿ ಇದೆ. ಜೊತೆಗೆ ಬಿಜೆಪಿ ಪಕ್ಷ ಮಾಡಿದ ಮೆಗಾ ಮೋಸದ ಪಟ್ಟಿಯೂ ಕೂಡಾ ದಾಖಲಿಸಲಾಗಿದೆ.