ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

0
24

ಕಲಬುರಗಿ: ಅಂದಿನ ಹೈದರಾಬಾದ್ ಪ್ರಾಂತ್ಯವನ್ನು ನಿಜಾಮ ಆಳ್ವಿಕೆಯ ನೊಗದಿಂದ ಮುಕ್ತಗೊಳಿಸುವುದನ್ನು ನೆನಪಿಸುವ ೭೪ ನೇ ಕಲ್ಯಾಣ ಕರ್ನಾಟಕ ಉತ್ಸವವನ್ನು ಕಲಬುರಗಿ ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಸಾಂಪ್ರದಾಯಿಕವಾಗಿ ಉತ್ಸಾಹ ಮತ್ತು ಸಂಭ್ರಮದಿಂದ ಆಚರಿಸಲಾಯಿತು.

ವಿಶ್ವವಿದ್ಯಾಲಯದ ಉಪಕುಲಪತಿ ಡಾ.ನಿರಂಜನ್ ವಿ ನಿಷ್ಠಿ ಅವರು ಬ್ರಿಟಿ? ಆಳ್ವಿಕೆಯ ೧೩ ತಿಂಗಳ ನಂತರ ೧೯೪೮ ರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ವಿಮೋಚನೆಯ (ಕಲ್ಯಾಣ ಕರ್ನಾಟಕ ಉತ್ಸವ) ಸ್ಮರಣಾರ್ಥವಾಗಿ ರಾ?ಧ್ವಜವನ್ನು ಹಾರಿಸಿದರು.
ಈ ಸಂಧರ್ಭದಲ್ಲಿ ಸಮಕುಲಪತಿ ಪ್ರೊ ವಿ ಡಿ ಮೈತ್ರಿ, ಕುಲಸಚಿವ ಡಾ.ಅನೀಲಕುಮಾರ ಬಿಡವೆ, ಕುಲಸಚಿವ (ಮೌಲ್ಯಮಾಪನ) ಡಾ ಲಿಂಗರಾಜ ಶಾಸ್ತ್ರೀ, ಡೀನ್ ಡಾ.ಬಸವರಾಜ ಮಠಪತಿ ಹಾಗೂ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Contact Your\'s Advertisement; 9902492681

ಸಂಭ್ರಮಾಚರಣೆ ನಿಮಿತ್ತ್ಯ ಭಾಗವಹಿಸಿದ ಗಣ್ಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು. ಅಂದಿನ ಉಪಪ್ರಧಾನಿ ಮತ್ತು ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಗಣ್ಯರು ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here