ಪಿಂಜಾರ ನದಾಫ ಸಂಘದಿಂದ ಪತ್ರಕರ್ತರಿಗೆ ಶುಭಾಷ ಕೋರಿಕೆ

0
19

ಯಾದಗಿರಿ: ಇಂದು ಪತ್ರಿಕಾ ದಿನಾಚಾರಣೆ ಹಿನ್ನೆಲೆ ಪತ್ರಕರ್ತರಿಗೆ ಕರ್ನಾಟಕ ಪಿಂಜಾರ ನದಾಫ ಹಿತರಕ್ಷಣಾ ಸಮಿತಿ ರಾಜ್ಯ ಕಾರ್ಯಾಧ್ಯಕ್ಷ ಸೋಪಿಸಾಬ ಡಿ ಸುರಪುರ ಶುಭಕೋರಿದ್ಧಾರೆ.

ಪತ್ರಕರ್ತ ಮಿತ್ರರೆಲ್ಲರಿಗೂ ಪತ್ರಿಕಾ ದಿನಾಚರಣೆಯ ಶುಭಾಶಯಗಳು. ಕೋವಿಡ್ – 19 ಮೊದಲನೇ ಹಾಗೂ ಎರಡನೇ ಅಲೆಯ ಸಂದರ್ಭದಲ್ಲಿ”ಜನ ಮತ್ತು ಸಮಾಜದ ” ಹಿತಕ್ಕಾಗಿ ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಾಹಿಸಿದ ನಿಮ್ಮ ಕಾಳಜಿ ಮತ್ತು ಬದ್ದತೆಗೆ ಬೆಲೆಕಟ್ಟಲು ಸಾಲದು ಎಂದು ಸ್ಮರಿಸಿದ್ದಾರೆ.

Contact Your\'s Advertisement; 9902492681

ಇಂತಹ ಕಷ್ಟಕಾಲದಲ್ಲೂ ವೃತ್ತಿಪರತೆಯನ್ನು ಎತ್ತಿಹಿಡಿದ ಪತ್ರಕರ್ತರಿಗೆ ನನ್ನ ಕೋಟಿ ಕೋಟಿ ನಮನಗಳು.

ಕೊರೊನಾ ಸಹಜ ಸ್ಥಿತಿಗೆ ಬರುತ್ತಿರುವುದರಲ್ಲಿ ಮಾಧ್ಯಮ ಮತ್ತು ಪತ್ರಕರ್ತರ ಅಸಾಧಾರಣ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ವರ್ತಮಾನದ ದಿನಗಳಲ್ಲಿ ಸತ್ಯಶೋಧಿಸುವ, ಧೈರ್ಯದಿಂದ ಅಭಿವ್ಯಕ್ತಿಸುವ ಮಾಧ್ಯಮದ ಶಕ್ತಿ ಪ್ರಜ್ವಲವಾಗಿ ಬೆಳಗಲಿ. ನನ್ನ ಸಮಸ್ತ ಪತ್ರಕರ್ತ ಮಿತ್ರರಿಗೆ ಪತ್ರಿಕಾ ದಿನಾಚರಣೆಯ ಶುಭಾಶಯಗಳು ಎಂದು ಸೋಪಿಸಾಬ ಡಿ ಸುರಪುರ ಶುಭಕೋರಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here