Monday, July 15, 2024
ಮನೆಬಿಸಿ ಬಿಸಿ ಸುದ್ದಿರಾಷ್ಟ್ರೀಯ ಪತ್ರಿಕಾ ದಿನಾಚರಣೆ: ಶ್ರೀಗಿರಿ ಮಠದಲ್ಲಿ ಪತ್ರಕರ್ತರ ಸನ್ಮಾನ

ರಾಷ್ಟ್ರೀಯ ಪತ್ರಿಕಾ ದಿನಾಚರಣೆ: ಶ್ರೀಗಿರಿ ಮಠದಲ್ಲಿ ಪತ್ರಕರ್ತರ ಸನ್ಮಾನ

ಸುರಪುರ: ತಾಲೂಕಿನ ಲಕ್ಷ್ಮೀಪುರ ಬಿಜಾಸಪುರ ಬಳಿಯ ಮರಡಿ ಮಲ್ಲಿಕಾರ್ಜುನ ದೇವಸ್ಥಾನದ ಬಳಿಯ ಶ್ರೀಗಿರಿ ಮಠದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರಿಗೆ ಸನ್ಮಾನ ಸಮಾರಂಭ ನಡೆಸಲಾಯಿತು.

ಕಳೆದ ಕೆಲ ದಿನಗಳ ಹಿಂದೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪಡೆದ ಪತ್ರಕರ್ತ ಅಶೋಕ ಸಾಲವಾಡಗಿ,ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕುವೆಂಪು ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ರಾಜು ಕುಂಬಾರ ಮತ್ತು ಎಲ್ಲಾ ಪತ್ರಕರ್ತರ ಪರವಾಗಿ ಕರ್ನಾಟಕ ಜರ್ನಲಿಷ್ಟ್ಸ್ ಯೂನಿಯನ್ ಜಿಲ್ಲಾಧ್ಯಕ್ಷ ಡಿ.ಸಿ.ಪಾಟೀಲ್ ಕೆಂಭಾವಿ ಇವರುಗಳನ್ನು ಸನ್ಮಾನಿಸಿದ ಶ್ರೀಮಠದ ಪೀಠಾಧಿಪತಿ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ,ಇಂದು ಸಮಾಜ ಪತ್ರಕರ್ತರನ್ನು ತುಂಬಾ ಗೌರವದಿಂದ ಕಾಣುತ್ತದೆ,ಅದರಂತೆ ಪತ್ರಕರ್ತರು ಕೂಡ ಎಂತಹ ಸಂದರ್ಭದಲ್ಲೂ ತಮ್ಮ ಜೀವದ ಹಂಗನ್ನು ತೊರೆದು ಕಾರ್ಯನಿರ್ವಹಿಸುತ್ತಾರೆ.ಇದನ್ನು ಪರಿಗಣಿಸಿ ಇಂದು ಶ್ರೀ ಮಠದಲ್ಲಿ ಪತ್ರಕರ್ತರನ್ನು ಸನ್ಮಾನಿಸುತ್ತಿರುವುದು ತುಂಬಾ ಸಂತೋಷದ ಸಂಗತಿಯಾಗಿದೆ ಎಂದರು.

ನಂತರ ಮೂವರು ಪತ್ರಕರ್ತರಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಶ್ರೀಮಠದ ಚಂದ್ರಶೇಖರ ಡೊಣೂರ,ಶಿವರಾಜ ಕಲಕೇರಿ,ಗಂಗಾಧರ ಶಾಸ್ತ್ರಿ ಹಾಗು ಪತ್ರಕರ್ತರಾದ ಮಲ್ಲಿಕಾರ್ಜುನ ತಳ್ಳಳ್ಳಿ,ಮನಮೋಹನ್ ದೇವಾಪುರ,ಶ್ರೀಮಂತ ಚಲುವಾದಿ ಸೇರಿದಂತೆ ಅನೇಕರಿದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular