ಕಲಬುರಗಿ: ಜಿಲ್ಲೆಯ ಅಫಜಲಪೂರ ತಾಲೂಕಿನ ಶ್ರೀಕ್ಷೇತ್ರ ಗಾಣಗಾಪುರಕ್ಕೆ ಕರ್ನಾಟಕ ಸರ್ಕಾರದ ಸಚಿವರಾದ ಗೋವಿಂದ ಕಾರಜೋಳ ಅವರು ಕುಟುಂಬ ಸಮೇತ ಆಗಮಿಸಿ ಪೂಜೆ ಮಾಡಿ ದರ್ಶನವನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ರಾಘವೇಂದ್ರ ಕುಲಕರ್ಣಿ ಕೋಗನೂರು ಹಾಗೂ ಮುಖ್ಯ ಅರ್ಚಕರಾದ ನಂದಕುಮಾರ ಪಟ್ಟ ಪೂಜಾರಿ ಹಾಗೂ ಇನ್ನಿತರರು ಇದ್ದರು.