ಸುರಪುರ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ದಲಿತ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಒಕ್ಕೂಟದ ಮುಖಂಡರು ನಗರದ ಟೈಲರ್ ಮಂಜಿಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ,ಕೆಬಿಜೆಎನ್ಎಲ್ ಇಲಾಖೆಯಡಿಯ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರ ಆಯ್ಕೆಯನ್ನು ಗ್ರಾಮಸಭೆಯ ಮೂಲಕ ಮಾಡಬೇಕು.ಕೆಬಿಜೆಎನ್ಎಲ್ನ ನಾಲ್ಕು ವಲಯಗಳಲ್ಲಿ ೨೦೧೭ರ ವರೆಗೆ ನಡೆದ ಟೆಂಡರ್ ಉಳಿತಾಯ ಹಣವನ್ನು ಬೇರೆ ಮತಕ್ಷೇತ್ರಕ್ಕೆ ವರ್ಗಾವಣೆಯಾಗಿದ್ದು ಇದರ ತನಿಖೆ ನಡೆಸಬೇಕು ಮತ್ತು ಅನೇಕ ಅಧಿಕಾರಿಗಳು ಸುಮಾರು ವರ್ಷಗಳಿಂದ ಒಂದೇಕಡೆಯಲ್ಲಿ ಇರುವುದರಿಂದ ಭ್ರಷ್ಟಾಚಾರಕ್ಕೆ ಅವಕಾಶ ನೀಡಿದಂತಾಗಿದೆ.
ಆದ್ದರಿಂದ ಕೂಡಲೇ ಅನೇಕ ವರ್ಷಗಳಿಂದ ಒಂದೆಡೆ ಇರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸುತ್ತೇವೆ,ಒಂದು ವೇಳೆ ನಮ್ಮ ಮನವಿಗೆ ಸ್ಪಂಧಿಸದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.ಈ ಸಂದರ್ಭದಲ್ಲಿ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ನಿಂಗಣ್ಣ ದೇವರಗೋನಾಲ,ರೈತ ಘಟಕದ ಅಧ್ಯಕ್ಷ ಗೋಪಾಲ ಬಾಗಲಕೋಟೆ ಸೇರಿದಂತೆ ಅನೇಕರಿದ್ದರು.