ಸುರಪುರ: ತಾಲೂಕಿನ ರುಕ್ಮಾಪುರದ ಕೊಟ್ಟುರು ಬಸವೇಶ್ವರ ಶಿಕ್ಷಣ ಸಂಸ್ಥೆಯ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗ್ಗಳನ್ನು ವಿತರಣೆ ಮಾಡಲಾಯಿತು.ಶ್ರೀಮತಿ ಭಿಮಾಬಾಯಿ ನಾರಾಯಣಪ್ಪ ಭಂಡಾರೆಯವರ ಸ್ಮರ್ಣಾರ್ಥವಾಗಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನಿವೃತ್ತ ಪ್ರಾಂಶುಪಾಲ ಉಮಾಕಾಂತ ಮಿಣಜಿಗಿ ಮಾತನಾಡಿ,ಮಕ್ಕಳು ಬ್ಯಾಗ್ನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು ಮತ್ತು ಎಲ್ಲಾ ಮಕ್ಕಳು ಸರಿಯಾಗಿ ಓದಿ ಜೀವನದಲ್ಲಿ ಮುಂದೆ ಬರುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಎಸ್ಪಿ ಚಂದ್ರಕಾಂತ ಭಂಡಾರೆ,ಖಜಾಂಚಿ ಆನಂದ್ ಗೋಗಿ,ಮುಖ್ಯ ಶಿಕ್ಷಕಿಯರಾದ ಉಮಾ ಪಾಟೀಲ್,ಉಷಾ ಪಾಟೀಲ್ ಸೇರಿದಂತೆ ಎಲ್ಲಾ ಶಿಕ್ಷಕರು ಮತ್ತು ಸಿಬ್ಬಂದಿಗಳು ಹಾಗು ವಿದ್ಯಾರ್ಥಿಗಳಿದ್ದರು.