ಸುರಪುರ ವೀಕೆಂಡ್ ಕರ್ಫ್ಯೂ ಮೊದಲ ದಿನ ಯಶಸ್ವಿ

0
25

ಸುರಪುರ: ರಾಜ್ಯದಲ್ಲಿ ಕೊರೊನಾ ಹಾಗು ಒಮೈಕ್ರಾನ್ ಸೊಂಕಿನ ಪ್ರಕರಣಗಳು ದಿನೆ ದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಸುರಪುರ ನಗರದಲ್ಲಿ ಮೊದಲ ದಿನದ ಕರ್ಫ್ಯೂ ಯಶಸ್ವಿಯಾಗಿದೆ.

ಶುಕ್ರವಾರ ರಾತ್ರಿಯಿಂದಲೂ ಪೊಲೀಸ್ ಇಲಾಖೆ ಹಾಗು ನಗರಸಭೆಯಿಂದ ವ್ಯಾಪಕವಾಗಿ ಪ್ರಚಾರ ನಡೆಸಿ ವೀಕೆಂಡ್ ಕರ್ಫ್ಯೂ ಅಂಗವಾಗಿ ಯಾರೂ ಮನೆಯಿಂದ ಹೊರಗೆ ಬರದಂತೆ ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ತಿಳಿಸಲಾಗಿತ್ತು.ಅದರಂತೆ ಶನಿವಾರ ಮುಂಜಾನೆಯಿಂದಲೂ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದಾಗಿದ್ದವು.ಆದರೆ ಹಾಲು ಹಣ್ಣು ತರಕಾರಿ ಮಾಂಸ ಮೊಟ್ಟೆ ಮತ್ತು ಮೆಡಿಕಲ್ ಶಾಪ್‌ಗಳು ಕಿರಾಣಿ ಅಂಗಡಿಗಳು ಎಂದಿನಂತೆ ವ್ಯಾಪಾರ ನಡೆಸಿದರು.

Contact Your\'s Advertisement; 9902492681

ಆದರೆ ಶನಿವಾರ ಬೆಳಿಗ್ಗೆಯಿಂದಲೂ ನಗರದಾದ್ಯಂತ ಎಲ್ಲಾ ಕಡೆಗಳಲ್ಲಿ ಪೊಲೀಸರು ಗಸ್ತು ನಡೆಸಿ ಕರ್ಫ್ಯೂ ಉಲ್ಲಂಘಿಸದಂತೆ ನಿಗಾವಹಿಸಿದ್ದರು.ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪಿಐ ಸುನೀಲಕುಮಾರ್ ಮೂಲಿಮನಿಯವರ ನೇತೃತ್ವದಲ್ಲಿ ಬೀಡುಬಿಟ್ಟಿದ್ದ ಪೊಲೀಸರು ಅನಾವಶ್ಯಕವಾಗಿ ಹೊರಗೆ ಬಂದವರಿಗೆ ದಂಡದ ಬಿಸಿ ಮುಟ್ಟಿಸಿದರು.

ಈ ಕುರಿತು ಪೊಲೀಸ್ ಇನ್ಸ್ಪೇಕ್ಟರ್ ಸುನೀಲಕುಮಾರ ಮೂಲಿಮನಿ ಮಾತನಾಡಿ,ಈಗಾಗಲೇ ಜನರಿಗೆ ಅನಾವಶ್ಯಕವಾಗಿ ಹೊರಗೆ ಬರದಂತೆ ತಿಳಿಸಿದ್ದರು ಕೆಲವರು ಹೊರಗಡೆ ಬಂದು ಓಡಾಡುತ್ತಿದ್ದವರ ೧೫ ಬೈಕ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಅಲ್ಲದೆ ಮಾಸ್ಕ್ ಧರಿಸದೆ ಓಡಾಡುತ್ತಿದ್ದ ೫೦ ಜನರಿಗೆ ದಂಡ ಹಾಕಿ ಎಚ್ಚರಿಕೆ ನೀಡಲಾಗಿದೆ ಅಲ್ಲದೆ ಹೋಟೆಲ್ ಒಂದರಲ್ಲಿ ಕೊರೊನಾ ಲಸಿಕೆ ಪಡೆದುಕೊಳ್ಳದೆ ಕೆಲಸ ಮಾಡುತ್ತಿರುವವನ ಮೇಲೆ ಕೇಸ್ ದಾಖಲಿಸಲಾಗಿದೆ ಎಂದು ತಿಳಿಸಿದರು.

ಆದರೆ ಮೊದಲ ದಿನದ ಕರ್ಫ್ಯೂ ಯಶಸ್ವಿ ಮದ್ಯೆಯೆ ನಗರದ ತರಕಾರಿ ಮಾರುಕಟ್ಟೆಯಲ್ಲಿ ಜನ ಜಂಗುಳಿ ಸೇರಿರುವುದು ಕಂಡು ಬಂದಿದೆ.ರಸ್ತೆ ಬದಿಯಲ್ಲಿಯೇ ತರಕಾರಿ ಮಾಡುತ್ತಿರುವುದರಿಂದ ಮತ್ತು ಕಿರಾಣಿ ಅಂಗಡಿಗಳು ತೆಗೆದಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿರುವುದು ಕಂಡುಬಂದಿದೆ.ಮಹಾತ್ಮ ಗಾಂಧಿ ವೃತ್ತ,ದರಬಾರ ರಸ್ತೆಯಲ್ಲಿ ಅಂಗಡಿ ಮುಂಗಟ್ಟುಗಳು ಬಂದಾಗಿದ್ದರೆ ರಸ್ತೆಗಳು ಬಿಕೋ ಎಂದರೆ ತರಕಾರಿ ಮಾರುಕಟ್ಟೆಯಲ್ಲಿ ಹಾಗು ಸರದಾರ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು.ಇವೆಲ್ಲವುಗಳ ಮದ್ಯೆ ಮೊದಲ ದಿನದ ಕರ್ಫ್ಯೂ ಯಶಸ್ವಿಯಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here