ಸುರಪುರ: ನಗರದ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಕಾರ್ಯಾಲಯದಲ್ಲಿ ಶಿರಸಂಗಿ ಲಿಂಗರಾಜ ದೇಸಾಯಿವರ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ದೇಸಾಯಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಹಾಸಭೆಯ ರಾಜ್ಯ ಯುವ ಘಟಕದ ಉಪಾಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ,ಮಹಾಸಭಾ ತಾಲೂಕು ಅಧ್ಯಕ್ಷ ಮಂಜುನಾಥ ಜಾಲಹಳ್ಳಿ,ಉಪಾಧ್ಯಕ್ಷ ಸಿದ್ದನಗೌಡ ಹೆಬ್ಬಾಳ,ಕೊಶಾಧ್ಯಕ್ಷ ಬಸವರಾಜ ಬೂದಿಹಾಳ, ಪ್ರಮುಖರಾದ ಜಗದೀಶ ಪಾಟೀಲ್ ಸೂಗುರು, ಸಿದ್ದಣಗೌಡ ಪಾಟಿಲ್ ದೇವಾಪೂರ, ಪ್ರಕಾಶ ಅಂಗಡಿ ಹೆಮ್ಮಡಗಿ, ರವಿಗೌಡ ಹೇಮನೂರು, ಶೇಖು ಭೂಮಶೆಟ್ಟಿ, ಲಿಂಗರಾಜ ಶಾಬಾದಿ, ರವಿ ದೇವಾಪುರ, ಗುರು ಕಲ್ಮನಿ ಸೇರಿದಂತೆ ಇತರರಿದ್ದರು.