ಜೇವರ್ಗಿ: ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಬಾಲಕರ ಸರ್ಕಾರಿ ಪಿಯು ಕಾಲೇಜಿನಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಿಸಲಾಯಿತು.
ಕಾಲೇಜಿನ ಪ್ರಾಚಾರ್ಯ ಮೊಹಮ್ಮದ್ ಅಲ್ಲಾ ಉದ್ದೀನ್ ಸಾಗರ, ಉಪನ್ಯಾಸಕರಾದ ಚಂದ್ರಪ್ರಭ ಕಮಲಾಪುರಕರ್, ರವೀಂದ್ರಕುಮಾರ ಬಟಗೇರಿ, ಶರಣಮ್ಮ ಭಾವಿಕಟ್ಟಿ, ಎಚ್.ಬಿ.ಪಾಟೀಲ, ಶಂಕ್ರೆಪ್ಪ ಹೊಸದೊಡ್ಡಿ, ಪ್ರ.ದ.ಸ ನೇಸರ ಎಂ. ಬೀಳಗಿ, ನಿಯೋಜಿತ ಉಪನ್ಯಾಸಕ ಭೀಮಾಶಂಕರ ಕೋರೆ, ಅತಿಥಿ ಉಪನ್ಯಾಸಕರಾದ ರಂಜಿತಾ ಠಾಕೂರ್, ಬಸವರಾಜ ಎಸ್. ಪುರಾಣೆ ಸೇರಿದಂತೆ ಮತ್ತಿತರರಿದ್ದರು.