ಕಲಬುರಗಿ: ಸಚಿವ ಕೆ.ಎಸ್ ಈಶ್ವರಪ್ಪ 40% ಕಮಿಷನ್ ವ್ಯವಹಾರದ ಕುರಿತು ಬಿಜೆಪಿ ಪಕ್ಷದ ಕಾರ್ಯಕರ್ತ ಸಂತೋಷ ಪಾಟೀಲ್ ಆತ್ಮಹತ್ಯೆ ಬಿಜೆಪಿ ಸರಕಾರ ಕಮಿಷನ್ ವ್ಯವಹಾರ ನಡೆಸುತ್ತಿರುವ ದಾಖಲೆ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ಶರಣ ಪ್ರಕಾಶ ಪಾಟೀಲ್ ಆರೋಪಿಸಿದ್ದಾರೆ.
ಬುಧವಾರ ನಿವಾಸದಲ್ಲಿ ಮಾತನಾಡಿ ಅವರು ಸಂತೋಷ ಪಾಟೀಲ್ ಈಶ್ವರಪ್ಪ ವಿರುದ್ಧ 15 ದಿನಗಳಿಂದ ಕಮಿಷನ್ ವ್ಯವಹಾರಕ್ಕೆ ಮನನೊಂದು ಆತ್ಮಹತ್ಯೆ ಸೂಚನೆ ನೀಡುತ ಬಂದಿದ್ದಾರೆ. ಪ್ರಧಾನಿ ಮೋದಿ ಅವರ ಗಮನಕ್ಕೆ ಕಮಿಷನ್ ಕುರಿತು ಮಾಹಿತಿ ನೀಡಿದ್ದಾರೆ.
ಸಂತೋಷ ಆತ್ಮಹತ್ಯೆಗೆ ಸಚಿವ ಈಶ್ವರಪ್ಪ ಕಾರಣ. ಈಶ್ವರಪ್ಪ ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಿದರು.