ಕಲಬುರಗಿ: ಪವಿತ್ರ ರಂಜಾನ್ ಪ್ರಯುಕ್ತ 21ನೇ ಉಪವಾಸ ನಿಮಿತ್ತ ಶನಿವಾರ ನಗರದ ಎ.ಎನ್ ಬ್ಯಾಂಕೆಟ್ ಹಾಲ್ ನಲ್ಲಿ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ ಅವರು ಇಫ್ತೆಯಾರ್ ಕೂಟ ಏರ್ಪಡಿಸಿದರು.
ಇದನ್ನೂ ಓದಿ: ನನ್ನ ಟ್ವಿಟರ್ ಖಾತೆ ಹ್ಯಾಕ್ ಆಗಿದೆ: ಶಾಸಕ ಪ್ರಿಯಾಂಕ್ ಖರ್ಗೆ
ಈ ಸಂದರ್ಭದಲ್ಲಿ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ್ ಖರ್ಗೆ, ಕೆಪಿಸಿಸಿ ಉಪಾಧ್ಯಕ್ಷರಾದ ಡಾ. ಶರಣಪ್ರಕಾಶ್ ಪಾಟೀಲ್, ಅಫಜಲಪುರ ಶಾಸಕ ಎಂ.ವೈ ಪಾಟೀಲ್, ಜೇವರ್ಗಿ ಶಾಸಕ ಡಾ. ಅಜಯಸಿಂಗ್, ಬೀದರ್ ಕ್ಷೇತ್ರದ ಶಾಸಕ ರಹೀಮ್ ಖಾನ್, ಮಾಜಿ ಮಹಾಪೌರರಾದ ಶರಣು ಮೋದಿ, ಶಾಸಕಿ ಕನೀಜ್ ಫಾತೀಮಾ ಅವರ ಪುತ್ರ ಯುವ ಮುಖಂಡರಾದ ಫರಾಜ್ ಉಲ್ ಇಸ್ಲಾಂ ಸೇರಿದಂತೆ ಕಲಬುರಗಿ ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.
ಇದನ್ನೂ ಓದಿ: ಪಿಎಸ್ ಐ ಅಕ್ರಮ ನೇಮಕಾತಿ ಹಗರಣ: ಎಡಿಜಿಪಿ ವರ್ಗಾವಣೆಗೆ ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹ
ಇಫ್ತಿಯಾರ್ ಕೂಟದ ನಂತರ ಮುಸ್ಲಿಂ ಬಾಂಧವರು ಸಮೂಹಿಕವಾಗಿ ಫಂಕ್ಷನ್ ಹಾಲ್ ನಲ್ಲಿ ಮಗರೀಬ್ ನಮಾಝ್ ನೆರವೇರಿಸಿದರು.
ಇದನ್ನೂ ಓದಿ: ಕಲಬುರಗಿ ವಿಮಾನ ನಿಲ್ದಾಣಕ್ಕೆ ಖರ್ಗೆ ಹೆಸರಿಡಿ: ಆರ್.ಚೆನ್ನಬಸ್ಸು