ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ೩೯ ಹಾಗೂ ೪೦ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಹಾಗೂ ವಿಶ್ವವಿದ್ಯಲಯಗಳ ಕುಲಪತಿ ಥಾವರ್ಚಂದ ಗೆಹ್ಲೋಟ್ ಆಗಮಿಸಲಿದ್ದಾರೆ.
ಇದನ್ನೂ ಓದಿ: ಚಿಂಚೋಳಿ ಆರೋಗ್ಯ ಮೇಳ: ಪ್ರತಿಯೊಬ್ಬರು ಆರೋಗ್ಯ ಕಾರ್ಡ್ ಪಡೆಯಲು ಕೇಂದ್ರ ಸಚಿವ ಭಗವಂತ ಖೂಬಾ ಕರೆ
ಏ. ೨೭ರಂದು ಬೆಳಗ್ಗೆ ೧೧-೧೫ಕ್ಕೆ ವಿವಿಯ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜರುಗಲಿರುವ ವಾರ್ಷಿಕ ಘಟಿಕೋತ್ಸವಕ್ಕೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ, ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (ನ್ಯಾಕ್) ನಿರ್ದೇಶಕ ಪ್ರೊ. ಎಸ್.ಸಿ. ಶರ್ಮಾ ಆಗಮಿಸಲಿದ್ದಾರೆ ಎಂದು ಕುಲಪತಿ ಪ್ರೊ. ದಯಾನಂದ ಅಗಸರ ಹಾಗೂ ಕುಲಸಚಿವ ಶರಣಬಸಪ್ಪ ಕೋಟೆಪ್ಪಗೋಳ್ ತಿಳಿಸಿದ್ದಾರೆ.
ಇದನ್ನೂ ಓದಿ: ಶೋಭಾಯಾತ್ರೆ ಹಿನ್ನೆಲೆ:ಆಳಂದ ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧ