ಪರಮೇಶ್ವರಗೆ ಪಿಎಚ್. ಡಿ ಪದವಿ ಪ್ರದಾನ

0
52

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಲ್ಲಿ ಪರಮೇಶ್ವರ್ ತಳಕೇರಿ ಅಮೃತ ಅವರು “ಆಧುನಿಕ ಭಾರತಕ್ಕೆ ಡಾ. ಬಿ.ಆರ್ ಅಂಬೇಡ್ಕರ್ ಅವರ ಸಾಮಾಜಿಕ, ಆರ್ಥಿಕ, ರಾಜಕೀಯ ಚಿಂತನೆಗಳ ಪ್ರಸ್ತುತತೆ” ಕುರಿತು ಮಹಾಪ್ರಬಂಧ ಮಂಡಿಸಿದಕ್ಕಾಗಿ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಪಿಎಚ್. ಡಿ ನೀಡಿದೆ. ಡಾ. ಅಂಬೇಡ್ಕರ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಐ. ಎಸ್. ವಿದ್ಯಾಸಾಗರ ಮಾರ್ಗದರ್ಶನ ನೀಡಿದರು. ಪ್ರಸ್ತುತ ಪರಮೇಶ್ವರ್ ಅವರು ಆಳಂದ ತಾಲ್ಲೂಕಿನ ಮಾದನ ಹಿಪ್ಪರಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here