ಯಡಿಯೂರಪ್ಪ ಗೆಲ್ತಾರೆ: ಕೈ ಶಾಸಕ ಅಜಯಸಿಂಗ್ ಹೇಳಿಕೆ

0
371

ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಸದನದಲ್ಲಿ ವಿಶ್ವಾಸಮತ ಪಡೆಯಲಿದ್ದು, ನಾವು ಪ್ರತಿಪಕ್ಷ ಸ್ಥಾನದಲ್ಲಿ ಕೂರುತ್ತೇನೆ ಎಂದು ಜೇವರ್ಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಅಜಯಸಿಂಗ್ ಅವರು ಹೇಳಿಕೆ, ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಿದೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತೃಪ್ತ ಶಾಸಕರು ಸಚಿವ ಸ್ಥಾನಕ್ಕಾಗಿ ಒತ್ತಾಯಿಸೋಣ ಎಂದಿದ್ದರು. ಆದಾಗ್ಯೂ, ಅವರು ಏಕಾಏಕಿ ನಿರ್ಧಾರ ಕೈಗೊಂಡ ಕುರಿತು ನನಗೇನೂ ಗೊತ್ತಿಲ್ಲ ಎಂದರು.

Contact Your\'s Advertisement; 9902492681

ಮಾಜಿ ಮುಖ್ಯಮಂತ್ರಿ ದಿ. ಧರ್ಮಸಿಂಗ್ ಅವರ ಪುತ್ರನಾಗಿ ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ. ಅತೃಪ್ತ ಶಾಸಕರು ಸಚಿವ ಸ್ಥಾನಕ್ಕೆ ಒತ್ತಾಯಿಸೋಣ ಎಂದಿದ್ದರಿಂದ ನಾನೂ ಅವರೊಂದಿಗೆ ಇದ್ದೆ. ಆದಾಗ್ಯೂ, ಅತೃಪ್ತರು ಸರ್ಕಾರ ಬೀಳಿಸುವ ಕುರಿತು ನಿರ್ಧಾರ ಕೈಗೊಂಡಿದ್ದು ಮಾತ್ರ ನನಗೆ ಗೊತ್ತಾಗಲಿಲ್ಲ. ನನಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದೆ. ಮುಂದೊಮ್ಮೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಸಚಿವರಾಗುವ ಹಂಬಲ ಎಲ್ಲ ಶಾಸಕರಿಗೆ ಇದ್ದೇ ಇರುತ್ತದೆ. ನಾನೂ ಸಹ ಸಚಿವನಾಗಿ ಸೇವೆ ಸಲ್ಲಿಸಬೇಕು ಎಂಬ ಹಂಬಲ ಹೊಂದಿದ್ದೆ. ಆದಾಘ್ಯೂ, ಸದ್ಯಕ್ಕೆ ಆ ಅವಕಾಶ ಕೈತಪ್ಪಿದೆ. ಮುಂದೆ ಸಿಗಬಹುದು ಎಂಬ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here