ಶಹಾಪುರ: ಸುರಪುರದ ಶಾಸಕರಾದ ಯುವ ನಾಯಕರಾದ ಸನ್ಮಾನ್ಯ ಶ್ರೀ ನರಸಿಂಹ ನಾಯಕ ರಾಜೂಗೌಡ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಯಾದಗಿರಿ ಜಿಲ್ಲಾ ಯಾದಗಿರಿ ಜಿಲ್ಲಾ ಬಿಜೆಪಿ ಯುವ ಘಟಕದ ಅಧ್ಯಕ್ಷರಾದ ಶ್ರೀಕಾಂತಗೌಡ ಸುಬೇದಾರ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು
ಹೈದರಾಬಾದ್ ಕರ್ನಾಟಕದಲ್ಲಿ ಎಸ್ಟಿ ಸಮುದಾಯದ ಪ್ರಬಲ ಯುವ ಮುಖಂಡರಾದ ಹಾಗೂ ಕ್ರಿಯಾಶೀಲರಾದ ರಾಜುಗೌಡ ಅವರಿಗೆ ಸಚಿವ ಸ್ಥಾನ ನೀಡಿದರೆ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಹೊಂದಲು ಸಾಧ್ಯ ಜೊತೆಗೆ ಯುವಕರಿಗೆ ಸ್ಫೂರ್ತಿದಾಯಕವಾಗಿ ಕೆಲಸ ಮಾಡುತ್ತಾರೆ ಎಂದು ಹೇಳಿದರು.