ಕಲಬುರಗಿ: ವಿದ್ಯುತ್ ತಂತಿ ತಗುಲಿ ಬಾಲಕನೊಬ್ಬ ಅಸುನೀಗಿದ ಘಟನೆ ಜಿಲ್ಲೆಯ ಚಿತ್ತಾಪೂರ್ ತಾಲ್ಲೂಕಿನ ರಾವೂರ್ ಗ್ರಾಮದಲ್ಲಿ ವರದಿಯಾಗಿದೆ. ಮೃತನಿಗೆ ಮೊಹ್ಮದ್ ಕೈಫ್ (೧೧) ಎಂದು ಗುರುತಿಸಲಾಗಿದೆ.
ಬಾಲಕನು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿಕೆಟ್ ಆಟ ಆಡುವಾಗ ಶಾಲೆ ಮೇಲ್ಛಾವಣೆ ಮೇಲೆ ಚೆಂಡು ಬಿದ್ಚದ ಬಿದ್ದ ಪರಿಣಾಮ ಅದನ್ನು ತರಲು ಹೋದಾಗ ಹೈವೋಲ್ಟೇಜ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲಿಯೇ ಅಸುನೀಗಿದ.
ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಶಾಲೆಯ ಆವರಣದಲ್ಲಿ ಶವ ಇಟ್ಟು ಪ್ರತಿಭಟಿಸಿದರು. ಘಟನೆಗೆ ಗುಲಬರ್ಗಾ ವಿದ್ಯುತ್ ಪ್ರಸರಣಾ ನಿಗಮದ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಗ್ರಾಮದಲ್ಲಿ ಎಲ್ಲೆಂದರಲ್ಲಿ ವಿದ್ಯುತ್ ತಂತಿಗಳು ಜೋತು ಬಿದ್ದಿದ್ದು ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.
ಮೃತ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವಂತೆ ಅವರು ಆಗ್ರಹಿಸಿದರು. ಈ ಕುರಿತು ವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಘಟನಾ ಸ್ಥಳಕ್ಕೆ ಪಿಎಸ್ಐ ವಿಜಯಕುಮಾರ್ ಬಾವಗಿ ಅವರು ಭೇಟಿ ನೀಡಿ ಪರಿಶೀಲಿಸಿದರು.