ಕಲ್ಯಾಣ ಶಿಕ್ಷಣ ವಿಶೇಷ ಉಪನ್ಯಾಸ ಇಂದು

0
24

ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಾ ಘಟಕ ಕಮಲಾಪುರ ವತಿಯಿಂದ ಕಲ್ಯಾಣ ಕರ್ನಾಟಕೋತ್ಸವದ ಪ್ರಯುಕ್ತ ಕಲ್ಯಾಣ ಶಿಕ್ಷಣ ವಿಶೇಷ ಉಪನ್ಯಾಸವನ್ನು  ಕಮಲಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೆಪ್ಟೆಂಬರ್ 21ರಂದು ಬೆಳಗ್ಗೆ 11  ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕಮಲಾಪುರ ಕಸಾಪ  ನೂತನ ತಾಲೂಕು ಅಧ್ಯಕ್ಷ ಸುರೇಶ ಲೇಂಗಟಿ ತಿಳಿಸಿದ್ದಾರೆ.

ಕಮಲಾಪುರ ತಹಶಿಲ್ದಾರ ಸುರೇಶ ವರ್ಮಾ  ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ   ಶಶಿಕಲಾ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.

Contact Your\'s Advertisement; 9902492681

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ  ಅಶಯ ನುಡಿಗಳನ್ನು ಮತ್ತು ಜಿಲ್ಲಾ ಕಸಾಪ ಸಂಘ ಸಂಸ್ಥೆ ಪ್ರತಿನಿಧಿ ಕಲ್ಯಾಣಕುಮಾರ  ಶೀಲವಂತ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ನಿವೃತ್ತ ಶಿಕ್ಷಕ  ಪುಂಡಲಿಕರಾವ ಚಿರಡೆ,  ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಮಿಟ್ಟೇಸಾಬ ಮುಲ್ಲಾ,ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪರಮೇಶ್ವರ ಓಕಳಿ, ಕಮಲಾಪುರ ಸರಕಾರಿ ಪ್ರೌಢಶಾಲಾ ಸಂಘದ ಅಧ್ಯಕ್ಷ ಪ್ರಕಾಶ ನರೋಣಾ, ಕಸಾಪ ತಾಲೂಕು ಗೌರವ ಜಾರ್ಯದರ್ಶಿ ರವೀಂದ್ರ ಬಿ ಕೆ, ಕೋಶಾಧ್ಯಕ್ಷ ನಾಗಣ್ಣ ವಿಶ್ವಕರ್ಮ ಭಾಗವಹಿಸಲಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here