ಕಲಬುರಗಿ; ಮಾಜಿ ಸಚಿವೆ ಹಾಗೂ ಜೆಡಿಎಸ್ ರಾಜ್ಯ ಮಹಿಳಾ ವಿಭಾಗದ ಪೋಷಕರಾದ ಲೀಲಾದೇವಿ ಆರ್.ಪ್ರಸಾದ್ ಅವರ ಆದೇಶದ ಮೇರೆಗೆ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಮಹಿಳಾ ವಿಭಾಗಕ್ಕೆ ಮಹಿಳಾ ಅಧ್ಯಕ್ಷರನ್ನಾಗಿ ಮಹಾನಂದ ಪಡಶಟ್ಟಿ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ, ತಮ್ಮ ಜಿಲ್ಲೆಯಲ್ಲಿ ಪಕ್ಷದ ಎಲ್ಲಾ ಸಮುದಾಯದ ಮಹಿಳಾ ಮುಖಂಡರನ್ನು ಹಾಗೂ ಮಹಿಳಾ ಕಾರ್ಯಕರ್ತೆಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಕಲಬುರಗಿ ಜಿಲ್ಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಮಹಿಳಾ ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾಯೋನ್ಮುಖರಾಗುತ್ತೀರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.