ಕೋಣನಕುಂಟೆ: ಯಶಸ್ವಿಗೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರ

0
27

ಅನೇಕಲ್: ಗಂಧದನಾಡು ಜನಪರ ವೇದಿಕೆ-ಗಜವೇ ಆಯೋಜನೆಯಲ್ಲಿ ಬಮೂಲ್ ಮಾಜಿ ಅಧ್ಯಕ್ಷ ಹಾಗೂ ಬೆಂ.ದ.ವಿ.ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಆರ್. ಕೆ. ರಮೇಶ್ ರವರ 53ನೇ ಹುಟ್ಟು ಹಬ್ಬದ ಪ್ರಯುಕ್ತ ಕೋಣನಕುಂಟೆಯ ಈಶ್ವರಿ ಲೇಔಟ್ ನಲ್ಲಿ ಇಂದು “ಉಚಿತ ಆರೋಗ್ಯ ತಪಾಸಣಾ ಶಿಬಿರ”ವನ್ನು ಆಯೋಜಿಸಲಾಗಿತ್ತು.

ಆಕ್ಸ್ಫರ್ಡ್ ಆಸ್ಪತ್ರೆ, ಕೇಂದ್ರಿಯ ಆಯುರ್ವೇದ ಸಂಶೋಧನಾ ಸಂಸ್ಥೆ(CCRAS) ಹಾಗೂ ಕಗ್ಗಲೀಪುರದ ಸರ್ಕಾರಿ ಆಸ್ಪತ್ರೆಯ NCD ತಂಡ ಭಾಗವಹಿಸಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡಲಾಯಿತು.

Contact Your\'s Advertisement; 9902492681

ಈ ಕಾರ್ಯಕ್ರಮದಲ್ಲಿ CCRASನ ವೈದ್ಯರಾದ ಡಾ||ಮೇಧ, ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಂದ್ರ, ಗಜವೇ ಸಂಸ್ಥಾಪಕ ಅಧ್ಯಕ್ಷರಾದ ವಿಜಯರಾಮ, ಗಜವೇ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಸ್ವಾಭಿಮಾನಿ ಸತೀಶ್, ಆಕ್ಸ್ಫರ್ಡ್ ಆಸ್ಪತ್ರೆಯ ಶಿಬಿರ ಸಂಯೋಜಕರಾದ ರಘು, ಕಗ್ಗಲೀಪುರ ಸರ್ಕಾರಿ ಆಸ್ಪತ್ರೆಯ NCD ತಂಡದ ಅರುಣ್ ಕುಮಾರ್, ಶಶಿಕಲಾ, ಸರಿತಾ, ಸ್ಥಳೀಯ ಆಯೋಜಕರಾದ ಚೇತನ್ ರೆಡ್ಡಿ, ಶ್ರೀರಾಮ್, ವಿನುತಾ ಹೇರಳೆ, ಗಜವೇ ಬೆಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೇಮಂತ್ ಕುಮಾರ್, ಬೆಂ.ದ.ವಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಅರ್ಜುನ್ ಜಿ.ಆರ್ ಸೇರಿದಂತೆ ಹಲವರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here