ಆರ್.ಜೆ ಕಾಲೇಜಿನ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

0
28

ಕಲಬುರಗಿ: ಪದವಿಪೂರ್ವ ಶಿಕ್ಷಣ ಇಲಾಖೆಯ ಆಯೋಜಿಸಿದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಚಟುವಟಿಕೆ ಸ್ಪರ್ಧೆ 2022. ಜ್ಞಾನ ಸಿಂಚನ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ ಸ್ಪರ್ಧೆಗಳಾದ ಪ್ರಬಂಧದಲ್ಲಿ ಚೈತ್ರ ಜೋಶಿ ಪ್ರಥಮ ಸ್ಥಾನ, ಸಂಗಮೇಶ್ ದ್ವಿತೀಯ ಸ್ಥಾನ, ಚರ್ಚಾ ಸ್ಪರ್ಧೆಯಲ್ಲಿ ಸ್ಪಂದನಾ ನಡಗೇರಿ ಪ್ರಥಮ ಸ್ಥಾನ, ಆಶುಭಾಷಣದಲ್ಲಿ ಭ್ರಮರಾಂಬಿಕ ಗದ್ದುಗೆ ದ್ವಿತೀಯ ಸ್ಥಾನ, ಭಾವಗೀತೆಯಲ್ಲಿ ಸೌಜನ್ಯ ಜೋಶಿ ದ್ವಿತೀಯ ಸ್ಥಾನ ಪಡೆದು ಇವರೆಲ್ಲರೂ ಕಾಲೇಜಿಗೆ ಕಲಬುರಗಿ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ. ಇವರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದು ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಭುರ್ಲಿ ಪ್ರಹ್ಲಾದ್ ಹಾಗೂ ಕಾಲೇಜಿನ ಉಪನ್ಯಾಸಕರು ಸಿಬ್ಬಂದಿ ಬಳಗ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here