ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ

0
17

ಕಲಬುರಗಿ : ಕನ್ನಡನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘ ನಿಯಮಿತ, ಕಲಬುರಗಿ ವತಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಲೇಖಕರ ಪುಸ್ತಕಗಳಿಗೆ ಪ್ರಶಸ್ತಿಗಳನ್ನು ಕೊಡುವ ಯೋಜನೆಯನ್ನು ರೂಪಿಸಲಾಗಿದೆ. ಈಗಾಗಲೇ ಕಳೆದ ಎಂಟು ವರ್ಷಗಳಿಂದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಅದರಂತೆ ಈಗ 2021 ರಲ್ಲಿ ಪ್ರಥಮ ಮುದ್ರಣವಾದ ಕವನ ಸಂಕಲನ, ಕಥಾ ಸಂಕಲನ, ಕಾದಂಬರಿ, ಮಹಿಳಾ ಸಾಹಿತ್ಯ, ಹಾಗೂ ಸಂಕೀರ್ಣ ಕೃತಿಗಳನ್ನು ಅಹ್ವಾನಿಸಲಾಗಿದೆ.

ಲೇಖಕರು ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ ಜಿಲ್ಲೆಗಳ ನಾಗರಿಕರಾಗಿರಬೇಕು. ಕನ್ನಡನಾಡು ಪ್ರಕಾಶನದ ಪುಸ್ತಕಗಳನ್ನು ಮತ್ತು ಸಂಘದ ಆಡಳಿತ ಮಂಡಳಿ ಸದಸ್ಯರ ಮಸ್ತಕಗಳು ಹಾಗೂ ಸಂಪಾದಿತ ಪುಸ್ತಕಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಪ್ರಶಸ್ತಿಗಳು 5,000=00 ನಗದು, ಪ್ರಮಾಣ ಪತ್ರವನ್ನು ಒಳಗೊಡಿರುತ್ತದೆ. 2021ರಲ್ಲಿ ಪ್ರಕಟವಾದ ಉತ್ತಮ ಕಥಾಸಂಕಲನ, ಉತ್ತಮ ಕವನ ಸಂಕಲನ, ಉತ್ತಮ ಕಾದಂಬರಿ, ಮಹಿಳಾ ಸಾಹಿತ್ಯ ಮತ್ತು ಸಂಕೀರ್ಣ ವಿಭಾಗದಲ್ಲಿ ಉತ್ತಮ ಕೃತಿಗೆ ಪ್ರಶಸ್ತಿ ನೀಡಲಾಗುವುದು.

Contact Your\'s Advertisement; 9902492681

ಪುಸ್ತಕಗಳನ್ನು ಸಲ್ಲಿಸಲು ಕೊನೆಯ ದಿನಾಂಕ 25-12-2022, ತಮ್ಮ ಕೃತಿಯ ಮೂರು ಪ್ರತಿಗಳನ್ನು ಅಧ್ಯಕ್ಷರು “ಕನ್ನಡನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘ ನಿಯಮಿತ” ಜಿ.2 ವಿ. ವಿ.ಹಾಸ್ಟೇಲ್ ಕಾಂಪ್ಲೆಕ್ಸ್ ಸೇಡಂ ರಸ್ತೆ ಕಲಬುರಗಿ.-585105. ಈ ವಿಳಾಸಕ್ಕೆ ಖುದ್ದಾಗಿ ಇಲ್ಲವೆ ಅಂಚೆ ಮೂಲಕ ಕಳಿಸಿಕೊಡಲು ಕೋರಲಾಗಿದೆ.

ಈ ಪ್ರಶಸ್ತಿಯ ನೀಡಿಕೆಯಲ್ಲಿ ನಿರ್ಣಾಯಕರ ನಿರ್ಣಯವೇ ಅಂತಿಮ ಈ ಕುರಿತು ಪತ್ರ ವ್ಯವಹಾರ ಇಲ್ಲವೇ ವಿಚಾರಣೆಗೆ ಅವಕಾಶವಿಲ್ಲ. ಪ್ರಶಸ್ತಿಗೆ ಬಂದ ಪುಸ್ತಕಗಳನ್ನು ಹಿಂದುರಿಗಿಸಲಾಗುವುದಿಲ್ಲ.  ವಿವರಗಳಿಗಾಗಿ ಶ್ರೀ ಅಪ್ಪಾರಾವ ಅಕ್ಕೋಣಿ-9448570985 ಅಥವಾ ಡಾ. ಸ್ವಾಮಿರಾವ ಕುಲಕರ್ಣಿ- 9448333539 ಡಾ.ಶರಣಬಸಪ್ಪ ವಡ್ಡನಕೇರಿ 9741169055 ಇವರನ್ನು ಸಂಪರ್ಕಿಸಬಹುದಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here