ಸಾವಿತ್ರಿ ಬಾಯಿ ಫುಲೆ, ಫಾತಿಮಾ ಶೇಕ್ ರವರ ಜಯಂತೋತ್ಸವ

0
104

ವಿಜಯನಗರ: ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗುರುಭವನದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕದ ವತಿಯಿಂದ ಅಕ್ಷರ ಮಾತೆಯರು ಸಾವಿತ್ರಿ ಬಾಯಿ ಫುಲೆ ಹಾಗೂ ಫಾತಿಮಾ ಶೇಕ್ ರವರ ಜಯಂತೋತ್ಸವವನ್ನು ಆಚರಿಸಲಾಯಿತು.

ಶಿಕ್ಷಕಿ ಸೀಮಾರವರು ಕಾರ್ಯಕ್ರಮದ ನಿರೂಪಣೆ, ಸ್ವಾಗತ ಭಾಷಣವನ್ನು ಸೋಮಶೇಖರ್ ರವರು ಮಾಡಿದರು.ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸಿ.ಹನುಮಕ್ಕ, ಮಂಗಳಾ.ಟಿ, ಎಂ.ರಾಜು ಮತ್ತು ಆನಂದ್ ಕಡ್ಲಿ ಅವರನ್ನು ಸನ್ಮಾನಿಸಲಾಯಿತು.

Contact Your\'s Advertisement; 9902492681

ದಿನದ ವಿಶೇಷ ಉಪನ್ಯಾಸವನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಎನ್. ಚಿನ್ನಸ್ವಾಮಿ ಸೋಸಲೆ ರವರು ಮಾಡಿದರು.
ದಲಿತ ವಿದ್ಯಾರ್ಥಿ ಪರಿಷತ್ ನ ಜಿಲ್ಲಾ ಘಟಕದ ಅಧ್ಯಕ್ಷರಾದ ಹನುಮೇಶ್, ತಾಲ್ಲೂಕು ಘಟಕದ ಅಧ್ಯಕ್ಷರಾದ ಬಿ. ಬಿ. ಜಿ. ಗೌತಮ್ ಹಾಗೂ ಕಾರ್ಯದರ್ಶಿ ರಾಮಾನಾಯ್ಕ್ ಉಪಸ್ಥಿತರಿದ್ದರು.

ಹಾಗೂ ಕೂಡ್ಲಿಗಿ, ಹಡಗಲಿ, ಹರಪನಹಳ್ಳಿ ತಾಲೂಕಿನ ಪದಾಧಿಕಾರಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here