ಖರ್ಗೆ ಫೋಟೋ ವಿರೂಪಗೊಳಿಸಿದ ಆರೋಪ: ಬಿಜೆಪಿ ಕಾರ್ಯಕರ್ತನ ವಿರುದ್ಧ ಎಫ್ಐಆರ್

0
216

ಕಲಬುರಗಿ: ಕಲ್ಯಾಣ ಕರ್ನಾಟಕದ ಹಿರಿಯ ಮುತ್ಸದಿ ರಾಜಕಾರಣಿ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರ ಭಾವ ಚಿತ್ರವನ್ನು ವಿರೂಪಗೊಳಿಸಿ ಆರೋಪದಲ್ಲಿ ಚಿತ್ತಾಪುರನ ಬಿಜಿಪಿ ಕಾರ್ಯಕರ್ತನ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ತಾಪುರನ ತಾಲ್ಲೂಕಿನ ನಿವಾಸಿ ಅಶ್ವಥ್ ರಾಠೋಡ್ ಫೋಟೋ ವಿರೂಪಗೊಳಿಸಿ ಆರೋಪಿ. ಡಾ.ಮಲ್ಲಿಕಾರ್ಜುನ್ ಖರ್ಗೆ ಅವರ ಫೋಟೋವನ್ನು ಅವಮಾನ ರೀತಿಯಲ್ಲಿ ಎಡಿಟ್ ಮಾಡಿ ಮಲ್ಲಿಕಾರ್ಜುನ್ ಖರ್ಗೆ ಅವರೇ ನಿಮ್ಮ ಸೋಲಿಗೆ ನಿಮ್ಮ ಸುಪುತ್ರ ಕಾರಣ ಎಂದು ತಲೆ ಬರಹ ಬರೆದು ತನ್ನ ವಾಟ್ಸಪ್ ಸ್ಟೇಸ್ ಇಟ್ಟಿದ್ದ.

Contact Your\'s Advertisement; 9902492681

ಕರ್ನಾಟಕದ ಹಿರಿಯ ಮುತ್ಸದಿ ರಾಜಕಾರಣಿ ಎಂದು ಕರೆಸಿಕೊಳ್ಳುವ ರಾಷ್ಟ್ರ ಮಟ್ಟದ ಉನ್ನತ ಹುದ್ದೆಯಲ್ಲಿರುವ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರು ಅಪಾರ ಅಭಿಮಾನಿಗಳ ಬಳವನ್ನು ಹೊಂದಿದ್ದಾರೆ. ಬಿಜೆಪಿ ಕಾರ್ಯಕರ್ತನ ಕೃತ್ಯದಿಂದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಆರೋಪಿ ಅಶ್ವಥ್ ರಾಠೋಡ್ ವಿರುದ್ಧ ದೂರು ನೀಡಿ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ರಾತ್ರಿ ಪೊಲೀಸ್ ಠಾಣೆಯಲ್ಲಿ ಪಟ್ಟು ಹಿಡಿದಿದ್ದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಪುರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ಮುಕ್ತಾರ ಪಟೇಲ್, ವಿನೋದ ಗುತ್ತೇದಾರ್, ಸೂರ್ಯಕಾಂತ ಪೂಜಾರಿ, ಶ್ರೀಕಾಂತ ಸಿಂಧೆ, ಜಗದೀಶ ಚವ್ಹಾಣ್, ಶಿವಾಜಿ ಕಾಶಿ, ಶಿವಕಾಂತ ಬೆಣ್ಣೂರಕರ್, ಸಂತೋಷ ಪೂಜಾರಿ, ಮಲ್ಲಿಕಾರ್ಜುನ ಬೆಣ್ಣೂರಕರ್, ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here