ಕಲಬುರಗಿ: ಜಿಲ್ಲೆಯ ಕಾಳಗಿ ಪಟ್ಟಣದಲ್ಲಿ ಇದೆ ಜನೆವರಿ 29 ಕ್ಕೆ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತೋತ್ಸವವನ್ನು ಶ್ರೀ ನೀಲಕಂಠ ಕಾಳೆಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದು.
ಬೆಳ್ಳಿಗೆ 10:30 ಗಂಟೆಗೆ ಡಾ. ಅಂಬೇಡ್ಕರ್ ವೃತದಿಂದ ಶ್ರೀ ನೀಲಕಂಠ ಕಾಳೇಶ್ವರ ದೇವಸ್ಥಾನದ ವರೆಗೆ ಅಂಬಿಗರ ಚೌಡಯ್ಯ ನವರ ಭಾವಚಿತ್ರ ಮೆರವಣಿಗೆ ಮೂಲಕ ತೆರಳಿ 12:30 ಕ್ಕೆ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಷರು ಹಾಗೂ ಹಲವು ರಾಜಕೀಯ ಮುಖಂಡರು ಆಗಮಿಸುತ್ತಿದ್ದು. ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಕಾಳಗಿ ತಾಲೂಕಾ ಜಯಂತೋತ್ಸವ ಸಮಿತಿ ಅಧ್ಯಕ್ಷರಾದ ರವಿರಾಜ್ ಕೊರವಿಯವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂಧರ್ಭದಲ್ಲಿ ತಾಲೂಕಾ ಅಧ್ಯಕ್ಷರಾದ ರೇವಣಸಿದ್ಧಪ್ಪ ಚೇಂಗಟಿ, ಯುವ ಘಟಕದ ಅಧ್ಯಕ್ಷರು ಶಿವಕುಮಾರ ಕಮಕನೂರ್,ಪ್ರಧಾನ ಕಾರ್ಯದರ್ಶಿ ಸಿದ್ದು ಕೇಶ್ವರ್, ಶಿವರಾಯ ಕೊಯಿ, ರಾಜಕುಮಾರ ರಾಜಾಪುರ, ಪೃಥ್ವಿರಾಜ್ ನಾಮದಾರ, ಮಲ್ಲಿಕಾರ್ಜುನ್ ಎಸ್, ಮರಗುತ್ತಿ,ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.