ಕಲಬುರಗಿ: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಮಾರ್ಚ 7ರಂದು ಶಹಾಬಾದ ನಗರಕ್ಕೆ ಆಗಮಿಸುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹಾಗೂ ಹಲವಾರು ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿಕೊಡಬೇಕೆಂದು ಶಹಾಭಾದ ಬಿಜೆಪಿ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ ಮನವಿ ಮಾಡಿದರು.
ಅವರು ರವಿವಾರ ಶಹಾಬಾದ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಯಾತ್ರೆಗೆ ವಿಶೇಷವಾಗಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು, ಜಗದೀಶ ಶೆಟ್ಟರ್, ಕೇಂದ್ರ ಸಚಿವ ಭಗವಂತ ಖೂಬಾ, ಸಚಿವರಾದ ಬಿ.ಶ್ರೀರಾಮಲು, ಪ್ರಭು ಚವ್ಹಾಣ, ಹಾಲಪ್ಪ ಆಚಾರ್, ಆನಂದಸಿಂಗ, ಅರವಿಂದ ಲಿಂಬಾವಳಿ, ಬಾಬುರಾವ ಚಿಂಚನಸೂರ, ಮಾಲಿಕಯ್ಯ ಗುತ್ತೆದಾರ,ಸಿದ್ಧರಾಜು, ಮಾರುತಿರಾವ ಮೂಳೆ, ಕಲಬುರಗಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಸೇರಿದಂತೆ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹೆಲಿಕಾಪ್ಟರ್ ಮೂಲಕ ಜಿಇ ಕಾರ್ಖಾನೆಯ ಹೆಲಿಪ್ಯಾಡಗೆ ಆಗಮಿಸುವರು. 10:20 ಗಂಟೆಗೆ ಬಸವೇಶ್ವರ ವೃತ್ತದಿಂದ ನೆಹರು ವೃತ್ತಕ್ಕೆ ತೆರಳುವರು. ಬಾಬು ಜಗಜೀವನರಾಮ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವರು.ನಂತರ ನೆಹರು ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ವಿಜಯ ಸಂಕಲ್ಪ ಯಾತ್ರೆ-3 ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಪಕ್ಷದ ಸಂಘಟನೆ ಮತ್ತು ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ಯಾತ್ರೆ ಮಾಡುಲಾಗುತ್ತಿದೆ. ಅಲ್ಲದೇ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅಲ್ಲದೇ ಜನಮೆಚ್ಚುಗೆ ಪಡೆದ ಶಾಸಕರಾಗಿದ್ದಾರೆ. ಯಡಿಯೂರಪ್ಪನವರ ಆಗಮನದಿಂದ ಪಕ್ಷಕ್ಕೆ ಮತ್ತಷ್ಟು ಬರಲಿದೆ. ಆದ್ದರಿಂದ ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅರುಣ ಪಟ್ಟಣಕರ್,ಸದಾನಂದ ಕುಂಬಾರ, ಸಿದ್ರಾಮ ಕುಸಾಳೆ, ಬಸವರಾಜ ಬಿರಾದಾರ, ರವಿ ರಾಠೋಡ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.