ಕಲಬುರಗಿ: ಹೊಸದಾಗಿ ಪ್ರಾರಂಭಿಸಲಾಗಿರುವ ವಂದೇ ಭಾರತ ಎಕ್ಸಪ್ರೆಸ್ ರೈಲು ಸೇವೆಯನ್ನು ಕಲಬುರಗಿಯಿಂದ ಬೆಂಗಳೂರುವರೆಗೆ ವಿಸ್ತರಿಸುವಂತೆ ಜೈ ಕನ್ನಡಿಗರ ರಕ್ಷಣಾ ವೇದಿಕೆ ವತಿಯಿಂದ ಸೊಲ್ಲಾಪುರ ವಿಭಾಗದ ರೈಲ್ವೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ನಡೆಸಿದರು.
ವೇದಿಕೆ ಸಂಸ್ಥಾಪಕ ಅಧ್ಯಕ್ಷ ಸಚೀನ್ ಎಸ್.ಫರತಾಬಾದ, ಕಾಶಿನಾಥ ಮಾಳಗಿ, ಸುರೇಶ ಹನಗುಡಿ, ಅಕ್ಷಯ, ನವೀನ್ ಇದ್ದರು.