ನ್ಯಾ. ಸದಾಶಿವ ಆಯೋಗದ ವರದಿ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಭೋವಿ, ಲಂಬಾಣಿ,ಕೊರಚ,ಕೊರಮ ಸಮುದಾಯಗಳಿಗೆ ಮಾರಕವಾಗಿರುವ ನ್ಯಾ. ಸದಾಶಿವ ಆಯೋಗದ ವರದಿ ಹಿಂಪಡೆಯಬೇಕೆಂದು ಆಗ್ರಹಿಸಿ ಬುಧವಾರ ತಾಲೂಕಾ ಮೀಸಲಾತಿ ಸಂರಕ್ಷಣಾ ಒಕ್ಕೂಟ ವತಿಯಿಂದ ನಗರದ ವಾಡಿ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ತಾಲೂಕಾ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕುಮಾರ ಚವ್ಹಾಣ ಮಾತನಾಡಿ, ಬಿಜೆಪಿ ಸರಕಾರ ಮೀಸಲಾತಿ ನಿರ್ಣಯ ಕೈಗೊಳ್ಳುವ ಮೂಲಕ ಲಂಬಾಣಿ,ಭೋವಿ,ಕೊರಮ, ಕೊರಚ ಸಮುದಾಯದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದೊಂದು ಅವೈಜ್ಞಾನಿಕ ಮತ್ತು ಅಸಂವಿಧಾನಿಕ ನಿರ್ಧಾರವಾಗಿದೆ.ಈಗಾಗಲೇ ಜನೇವರಿ 10 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಸುಮಾರು 99 ಸಮುದಾಯದ ಜನರನ್ನು ಹಮ್ಮಿಕೊಂಡು ವಿರೋಧವನ್ನು ವ್ಯಕ್ತಪಡಿಸಲಾಗಿತ್ತು.

ಲಂಬಾಣಿ,ಭೋವಿ,ಕೊರಮ, ಕೊರಚ ಸಮುದಾಯಕ್ಕೆ ಕೇವಲ ಶೇ 4.5 ಮೀಸಲಾತಿ ನೀಡಿ ಅನ್ಯಾಯ ಮಾಡಿದೆ.ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎಂಬಂತೆ ಮಾಡಿ ಮೀಸಲಾತಿ ಗೊಂದಲ ಸೃಷ್ಠಿ ಮಾಡಿ ಸಮುದಾಯದ ನಡುವೆಯೂ ಧ್ವೇಷ ಬಿತ್ತುವ ಕೆಲಸ ಬಿಜೆಪಿ ಮಾಡುತ್ತಿದೆ. ಸಂವಿಧಾನ ಮೂಲ ಆಶಯವಾದ ಸಮಾನತೆಯನ್ನು ತೋರುವಲ್ಲಿ ಸರಕಾರ ವಿಫಲವಾಗಿದೆ.ಮಂಬರುವ ದಿನಗಳಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.ಕೂಡಲೇನ್ಯಾ.ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನಗೊಳಿಸದೇ ಕೇಂದ್ರ ಸರಕಾರಕ್ಕೆ ಕಳುಹಿಸಿದ ಶಿಫಾರಸ್ಸು ಹಿಂಪಡೆಯಬೇಕು ಎಂದುಹೇಳಿದರು.

ಪ್ರತಿಭಟನೆಯಿಂದ ಕೆಲ ಸಮಯ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.ಸ್ಥಳದಲ್ಲಿ ಭಾರಿ ಸಂಖ್ಯೆಯ ಪೊಲೀಸರು ಜಮಾಯಿಸಿದ್ದರು.ಮುನ್ನೆಚರಿಕೆ ಕ್ರಮವಾಗಿ ಪಿಐ ರಾಘವೇಂದ್ರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿತ್ತು.

ರವಿ ಚವ್ಹಾಣ, ನಾಮದೇವ ರಾಠೋಡ, ದೇವರಾಜ ರಾಠೋಡ, ಚಂದು ಜಾಧವ, ಕಿರಣ ಚವ್ಹಾಣ, ವೆಂಕಟೇಶ ಪವಾರ, ದಿಲೀಪ ನಾಯಕ ಇತರರು ಮಾತನಾಡಿದರು. ತಾಲೂಕಾ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಅಧ್ಯಕ್ಷ ಕಳ್ಳೊಳ್ಳಿ.ಬಿ.ಕುಸಾಳೆ,ಸುನೀಲ ಚವ್ಹಾಣ, ನರಸಿಂಗ ರಾಠೋಡ, ರಾಮ ಚವ್ಹಾಣ,ರಾಮು ಕುಸಾಳೆ, ರಮೇಶ ಮೇಲಗಿರಿ ಪವಾರ, ರಾಮಸ್ವಾಮಿ ದೇವಕರ್, ಬಾಬು ಪವಾರ, ಬಸವರಾಜ ದಂಡಗುಲಕರ್,ವೆಂಕಟೇಶ ಚೌದ್ರಿ,ತಿಪ್ಪಣ್ಣ ಕಣಸೂರ,ರಮೇಶ ಪವಾರ ಸೇರಿದಂತೆ ನೂರಾರು ಜನರು ಇದ್ದರು.

emedialine

Recent Posts

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

33 mins ago

ಸದ್ಗುಣ ಮೈಗೂಡಿಸಿ ಪ್ರಗತಿಪರ ಬದುಕು ಕಟ್ಟೋಣ : ಬಸವರಾಜ್ ಪಾಟೀಲ್ ಸೇಡಂ

ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…

2 hours ago

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

16 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

16 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

16 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420