ಶರಣಬಸವೇಶ್ವರ ಯಾತ್ರಿಕ್ ನಿವಾಸದ ಅಡಿಗಲ್ಲು ಪೂಜೆ

ಕಲಬುರಗಿ; ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವತಿಯಿಂದ 2.5 ಕೋಟಿ ರೂ ಅನುದಾನದಲ್ಲಿ ಶರಣಬಸವೇಶ್ವರ ಯಾತ್ರಿಕ್ ನಿವಾಸದ ನಿರ್ಮಾಣಕ್ಕಾಗಿ ಅಡಿಗಲ್ಲು ಸಮಾರಂಭ ಮತ್ತು ಭೂಮಿ ಪೂಜೆ ಕಾರ್ಯಕ್ರಮ ಜರುಗಿತು.

ವಿದ್ಯಾ ಭಂಡಾರಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಹಾಗೂ ಮಾತೋಶ್ರೀ ದಾಕ್ಷಾಯಿಣಿ ಎಸ್ ಅಪ್ಪ ಹಾಗೂ 9 ನೇ ಪೀಠಾಧಿಪತಿಗಳಾದ ಚಿ ದೊಡ್ಡಪ್ಪ ಅಪ್ಪ ಅವರ ದಿವ್ಯ ಸಾನಿಧ್ಯದಲ್ಲಿ ಈ ಕಾರ್ಯಕ್ರಮವು ಜರುಗಿತು.

ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಶಾಸಕ ದತ್ತಾತ್ರೇಯ ಸಿ ಪಾಟೀಲ್ ರೇವೂರ್, ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಾ ” ಕಾಯಕ ಮತ್ತು ದಾಸೋಹದ ಮುಖಾಂತರ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಈ ಭಾಗದ ಅಭಿವೃದ್ಧಿಗಾಗಿ ಶಿಕ್ಷಣ ಮತ್ತು ಅನ್ನ ದಾಸೋಹದ ಮುಖಾಂತರ ಪರಿಶ್ರಮಪಟ್ಟಿದ್ದು ಅವಿಸ್ಮರಣೀಯವಾಗಿದೆ. ಗುಣಮಟ್ಟದ ಶಿಕ್ಷಣದಿಂದ ಸಾವಿರಾರು ವಿದ್ಯಾರ್ಥಿಗಳ ಜೀವನ ಆನಂದವಾಗಿದೆ. ಸಂಕಷ್ಟದ ಸಮಯದಲ್ಲಿ ಮಾತೋಶ್ರೀ ದಾಕ್ಷಾಯಿಣಿ ಎಸ್ ಅಪ್ಪ ಅವರು ಅನ್ನದಾಸೋಹದ ಮುಖಾಂತರ ನಿರ್ಗತಿಕರ ಸೇವೆ ಮಾಡಿ ಶರಣರ ಮಹಿಮೆ ಪರಿಚಯ ಮಾಡಿಕೊಟ್ಟಿದ್ದಾರೆ” ಎಂದು ಅವರು ತಮ್ಮ ಭಾಷಣದಲ್ಲಿ ನುಡಿದರು.

ಮಾತೋಶ್ರೀ ದಾಕ್ಷಾಯಿಣಿ ಎಸ್ ಅಪ್ಪ ಅವರು ಮಾತನಾಡುತ್ತಾ “ದತ್ತಾತ್ರೇಯ ಸಿ ಪಾಟೀಲ್ ಅವರು ಶರಣರ ಮನೆತನದವರು, ಅವರ ಸೇವೆಯಿಂದ ಜನಸಾಮಾನ್ಯರಿಗೆ ಅತ್ಯಂತ ಲಾಭವಾಗುತ್ತಿದೆ. ಇನ್ನೂ ಹೆಚ್ಚಿನ ಸೇವೆ ಗೈದು ನಮ್ಮ ಕಲಬುರಗಿಯ ಹೆಸರು ಪ್ರಪಂಚದಲ್ಲೆಡೆ ಪಸರಿಸಲಿ ಎಂದು ಶುಭ ಆಶೀರ್ವಾದ ಮಾಡಿದರು.

ಎಸ್.ಬಿ.ಆರ್.ನ ಅಲುಮಿನಿ ಅಧ್ಯಕ್ಷರಾದ ಡಾ ಭರತ ಕೋಣಿನ್ ಮಾತನಾಡುತ್ತಾ “ಪೂಜ್ಯ ಅಪ್ಪಾಜಿ ಅವರು ಶಿಕ್ಷಣಕ್ಕಾಗಿ ಬಹಳಷ್ಟು ಶ್ರಮಪಟ್ಟಿದ್ದಾರೆ. ಈ ಶರಣಬಸವೇಶ್ವರ ಯಾತ್ರಿಕ್ ನಿವಾಸದ ಸುಸಜ್ಜಿತ ನಿರ್ಮಾಣಕ್ಕಾಗಿ ಎಸ್ ಬಿ ಆರ್ ನ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನಾವು ಕೂಡಾ 2 ಕೋಟಿ ಧನ ಸಹಾಯವನ್ನು ಮಾಡುತ್ತೇವೆ” ಎಂದು ಅವರು ಹೇಳಿದರು.

ಡಾ. ನಿರಂಜನ್ ನಿಷ್ಠಿ ಉಪಕುಲಪತಿಗಳು ಶರಣಬಸವ ವಿಶ್ವವಿದ್ಯಾಲಯ, ಎನ್ ಎಸ್ ದೇವರಕಲ್ ಪ್ರಾಚಾರ್ಯರು ಎಸ್ ಬಿ ಆರ್ ವಸತಿ ಪಬ್ಲಿಕ್ ಶಾಲೆ ಕಲಬುರಗಿ, ಬಸವರಾಜ್ ದೇಶಮುಖ ಕಾರ್ಯದರ್ಶಿಗಳು ಶರಣಬಸವೇಶ್ವರ ವಿದ್ಯಾವರ್ಧಕ ಸಂಘ, ವಾಸ್ತುಶಿಲ್ಪಿ ಬಸವರಾಜ್ ಖಂಡೇರಾವ್ ಹಾಗೂ ಗುರು ವೃಂದವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಡಾ. ಚಂದ್ರಕಾಂತ ಪಾಟೀಲ್ ಹಿಂದಿ ವಿಭಾಗದ ಮುಖ್ಯಸ್ಥರು ಶರಣಬಸವೇಶ್ವರ ವಸತಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಕಲಬುರಗಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

14 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

14 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

14 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

14 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

14 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

14 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420