ಸುರಪುರ: ನಗರದ ವಿವಿಧೆಡೆಗಳಲ್ಲಿ ಅಧ್ಧೂರಿಯಾಗಿ ಶ್ರೀರಾಮನವಮಿಯನ್ನು ಆಚರಿಸಲಾಯಿತು.ರಾಮ್ ಸೇನಾ ಸಂಘಟನೆಯಿಂದ ಶ್ರೀರಾಮನ ಭವ್ಯವಾದ ಮೂರ್ತಿಯ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.ಸಂಘಟನೆಯ ಜಿಲ್ಲಾಧ್ಯಕ್ಷ ಶರಣು ನಾಯಕ ಡೊಣ್ಣಿಗೇರ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಸಾವಿರಾರು ಭಾಗವಹಿಸಿದ್ದರು.ನಗರದ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನ ದಿಂದ ನಗರದ ಪ್ರಮುಖ ಬೀದಿಗಳ ಮೂಲಕ ಮೆರವಣಿಗೆ ನಡೆಸಲಾಯಿತು.ತಾಲೂಕು ಅಧ್ಯಕ್ಷ ಶರಣು ನಾಯಕ ದೀವಳಗುಡ್ಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಬಜರಂಗದಳ ಸಂಘಟನೆಯಿಂದ ಶ್ರೀರಾಮ ನವಮಿ ಅಂಗವಾಗಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಬೃಹತ್ ಗಾತ್ರದ ಶ್ರೀರಾಮನ ಕಟೌಟ್ ಹಾಕಿ ವಿಶೇಷ ಪೂಜೆ ಸಲ್ಲಿಸಿದರು.ಅಲ್ಲದೆ ಸಾರ್ವಜನಿಕರಿಗೆ ಪ್ರಸಾದ ಹಾಗೂ ಪಾನಕ ವಿತರಣೆಯನ್ನು ನಡೆಸಲಾಯಿತು. ಸಂಘಟನೆಯ ತಾಲೂಕು ಸಂಯೋಜಕ ಸಚಿನ ಕುಮಾರ ನಾಯಕ,ಗುರುನಾಥರಡ್ಡಿ ಶೀಲವಂತ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಮಧ್ವ ಮಂಟಪದಲ್ಲಿ ಶ್ರೀರಾಮ ಭಕ್ತ ಮಂಡಳಿಯಿಂದ ವಿಶೇಷವಾಗಿ ಶ್ರೀರಾಮ ನವಮಿ ಕಾರ್ಯಕ್ರಮ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ಪವಮಾನ ಹೋಮ,ಪೂಜೆ ನಡೆಸಲಾಯಿತು.ಅಲ್ಲದೆ ಕಾತ್ಯಾಯನಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಸಲಾಯಿತು.ಭೀಮಸೇನಚಾರ್ಯ ಜೋಷಿ,ನರಸಿಂಹಚಾರ್ಯ ಜೋಷಿ,ಮಲ್ಲಾರಾವ್ ಸಿಂದಗೇರಿ,ರಾಘವೇಂದ್ರ ಕುಲಕರ್ಣಿ ಗೆದ್ದಲಮರಿ,ಲಕ್ಷ್ಮೀಕಾಂತ ಅಮ್ಮಾಪುರ,ರಮೇಶ,ಚಂದ್ರಕಾಂತ ನಾಡಗೌಡ,ಗುಂಡುರಾವ್ ಅರಳಹಳ್ಳಿ,ದತ್ತುರಾವ್ ಏವೂರ,ಶ್ರೀನಿವಾಸ,ಪ್ರಾಣೇಶರಾವ್ ಸೇರಿದಂತೆ ಅನೇಕರಿದ್ದರು.
ನಗರದ ಶ್ರೀರಾಮ ಮಂದಿರದಲ್ಲಿ ವಿಶೇಷವಾಗಿ ಶ್ರೀರಾಮನವಮಿ ಆಚರಿಸಲಾಯಿತು. ವಿಶೇಷ ಪೂಜೆ,ಶ್ರೀ ವೇಣುಗೋಪಾಲ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ,ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ರಾಮಭಟ್ ಜೋಷಿ,ಶ್ರೀಹರಿರಾವ್ ಆದವಾನಿ, ಪ್ರಶಾಂತ ಭಟ್ ಜೋಷಿ,ನರಸಿಂಹಕಾಂತ ಪಂಚಮಗಿರಿ, ರಾಘವೇಂದ್ರ ಭಕ್ರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…