ಕಲಬುರಗಿ: ಒಳ ಮೀಸಲಾತಿ ನೀಡುವ ಮೂಲಕ ಮುಖ್ಯಮಂತ್ರಿಗಳು ಭಯದಿಂದ ಮುಕ್ತ ಮಾಡಿದ್ದಾರೆ ಎಂದು ಸಂಸದ ಡಾ.ಉಮೇಶ ಜಾಧವ್ ಹೇಳಿದರು.
ಸುಮಾರು ನಾ.ಸದಾಶಿವ ಆಯೋಗದ ವರದಿ ಜಾರಿ ಮಾಡಿದರೆ ನಮ್ಮ ಸಮುದಾಯದ ಪ್ರತಿಯೊಬ್ಬರು ಪರಿಶಿಷ್ಟ ಮೀಸಲಾತಿ ಹೋಗುತ್ತದೆ ಎಂಬ ಭಯದಲ್ಲಿದ್ದರು. ಯುವಕರು ಈ ಬಗ್ಗೆ ಜನ ಪ್ರತಿನಿಗಳಿಗೆ ಪ್ರಶ್ನೆ ಕೇಳುತ್ತಿದ್ದರು. 2006ರಿಂದ ಸಕ್ರಿಯ ರಾಜಕರಣದಲ್ಲಿರುವ ನಾನು ಈ ಬಗ್ಗೆ ಹಲವು ಸಭೆ ನಡೆಸಿದ್ದೇವು. ಆದರೆ ಇದಕ್ಕೆಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತಿಶ್ರೀ ಹಾಡಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಒಳ ಮೀಸಲಾತಿಯಲ್ಲಿ ವರ್ಗಿಕರಣ ಮಾಡುವ ಮೂಲಕ ಲಂಬಾಣಿ, ಕೊರಮ, ಕೊರಚ, ಭೋವಿ ಸಮುದಾಯಕ್ಕೆ ಶೇ.4.5ರಷ್ಟು ಒಳ ಮೀಸಲಾತಿ ನೀಡಿ ರಾಜ್ಯ ಸರಕಾರ ಆದೇಶ ನೀಡುವ ಮೂಲಕ, ಲಂಬಾಣಿಗರಲ್ಲಿ ಬೇರೂರಿದ್ದ ಭಯವನ್ನು ಕಿತ್ತು ಹಾಕಿದ್ದಾರೆ. ಅದಕ್ಕಾಗಿ ಅವರಿಗೆ ಸಮಾಜದ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ ಎಂದು ಹೇಳಿದರು.
ಸಮಾಜದ ಮುಖಂಡ ವಿಠಲ ಜಾಧವ್ ಮಾತನಾಡಿ, ಈ ಮೀಸಲಾತಿ ಬಗ್ಗೆ ಹಲವು ರೀತಿಯ ಗೊಂದಲ ಜನರಲ್ಲಿ ಮೂಡಿದೆ. ಅದನ್ನು ಹೊಗಲಾಡಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ. ಪ್ರತಿ ತಾಂಡಾಗಳಿಗೆ ತೆರಳಿ ಜಾಗೃತಿ ಮೂಡಿಸುವ ಕೆಲಸ 25 ಜನರ ತಂಡ ಮಾಡುತ್ತಿದೆ. ಒಳ ಮೀಸಲಾತಿ ಬಗ್ಗೆ ಗೊಂದಲ ಇರುವವರು ಸರಿಯಾದ ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು.
ಸಧ್ಯ ಕೇಂದ್ರದಲ್ಲಿ ಪ್ರಭಾವಿ ನಾಯಕರು ಬಂಜಾರ ಸಮುದಾಯ ಶೇ.3ರಷ್ಟು ಇದ್ದು, ಆದ್ದರಿಂದ ಸ್ಪರ್ಧೆಗೆ ಮೂರು ಕ್ಷೇತ್ರಗಳನ್ನು ನೀಡಿದ್ದರು. ಆದರೆ ಬಿಜೆಪಿ ಸರಕಾರ ಎಂದಿಗೂ ಬಂಜಾರ ಸಮುದಾಯಕ್ಕೆ ಅನ್ಯಾಯ ಮಾಡಿಲ್ಲ. ಕಳೆದ 70 ವರ್ಷಗಳಲ್ಲಿ ಆಗದ ಕೆಲಸಗಳನ್ನು ಇದೀಗ ಮಾಡುತ್ತಿದೆ. ಅದಕ್ಕಾಗಿ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸುವೆ ಎಂದು ಬಿಜೆಪಿ ಮುಖಂಡ ನಾಮದೇವ ರಾಠೋಡ ಹೇಳಿದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…