ಸುರಪುರ: ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದ ಬಳಿಯಲ್ಲಿ ಪ್ರತಿಷ್ಠಾಪಿಸಲಿರುವ ಅಶ್ವಾರೂಢ ಬಸವೇಶ್ವರರ ಪುತ್ಥಳಿಯನ್ನು ಸೋಲಾಪುರ ದಿಂದ ಇದೇ ಏಪ್ರಿಲ್ 23 ರಂದು ನಗರಕ್ಕೆ ಬರಲಿದೆ.
ಅಂದು ಪುತ್ಥಳಿಯನ್ನು ಬರಮಾಡಿಕೊಳ್ಳಲು ಪೂರ್ವಭಾವಿ ಸಭೆಯನ್ನು ಏಪ್ರಿಲ್ 1 ರಂದು ಸಂಜೆ 4 ಸಂಘಟನೆಗೆ ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಜರುಗಲಿದೆ.ಆದ್ದರಿಂದ ಸಭೆಗೆ ತಾಲೂಕಿನ ಎಲ್ಲಾ ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಮುಖಂಡರು,ಜನತೆ ಹಾಗೂ ಬಸವೇಶ್ವರರ ಅಭಿಮಾನಿಗಳು ಮತ್ತು ಅನುಯಾಯಿಗಳು ಆಗಮಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡುವಂತೆ ತಾಲೂಕು ವೀರಶೈವ ಲಿಂಗಾಯತ ಸಮಿತಿ ಎಲ್ಲರಲ್ಲಿ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿಕೊಂಡಿದ್ದಾರೆ.