ಕಲಬುರಗಿ: ಬಸವಾದಿ ಶರಣರ ತತ್ವಾದರ್ಶಗಳನ್ನು ಆಚರಣೆಯಲ್ಲಿ ತಂದು ಜ್ಞಾನದಾಸೋಹ -ಅನ್ನದಾಸೋಹದ ಮೂಲಕ ಲಕ್ಷಾನುಲಕ್ಷ ಭಕ್ತರ ಪಾಲಿಗೆ ಬೆಳಕಾದವರು ತ್ರಿವಿಧ ದಾಸೋಹಿ ಡಾ. ಶಿವಕುಮಾರ ಮಹಾಸ್ವಾಮಿಗಳು ಆಗಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.
ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಪರಮಪೂಜ್ಯ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳವರ ಜನ್ಮದಿನಾಚರಣೆಯ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾತಿ, ಧರ್ಮ, ಮತ-ಪಂಥಗಳ ಬೇಧ-ಭಾವವಿಲ್ಲದೆ ಮಾನವೀಯ ನೆಲೆಯಲ್ಲಿ ಮನಸ್ಸುಗಳನ್ನು ಕಟ್ಟಿದ ಮಹಾನ್ ಸಂತ ಡಾ. ಶಿವಕುಮಾರ ಮಹಾಸ್ವಾಮಿಗಳು ಆಗಿದ್ದಾರೆ. ನಾಡಿನ ಇಂಥ ಶ್ರೇಷ್ಠ ಸಂತರ ವಿಚಾರಗಳನ್ನು ಇಂದಿನ ಹೊಸ ಪೀಳಿಗೆಗೆ ಮುಟ್ಟಿಸುವ ಕಾರ್ಯ ಪರಿಷತ್ತು ಮಾಡುತ್ತಿದೆ ಎಂದು ಹೇಳಿದರು.
ಹಿರಿಯ ಸಾಹಿತಿ ಪ್ರೊ ಶಿವರಾಜ ಪಾಟೀಲ, ಡಾ. ಶರಣಪ್ಪ ಮಾಳಗಿ, ಪ್ರಕಾಶಕ ಬಸವರಾಜ ಕೋನೆಕ್, ಡಾ. ನಾಗವೇಣಿ ಪಾಟೀಲ, ರಮೇಶ ಧುತ್ತರಗಿ, ಜಿಲ್ಲಾ ಕಸಾಪ ದ ಶಿವರಾಜ ಅಂಡಗಿ, ಶರಣರಾಜ ಛಪ್ಪರಬಂದಿ, ಡಾ. ಕೆ.ಗಿರಿಮಲ್ಲ, ರಾಜೇಂದ್ರ ಮಾಡಬೂಳ, ಸಿದ್ಧಲಿಂಗ ಬಾಳಿ, ರವೀಂದ್ರಕುಮಾರ ಭಂಟನಳ್ಳಿ, ಶರಣಬಸಪ್ಪ ನರೂಣಿ, ಪ್ರಮುಖರಾದ ರೇವಣಸಿದ್ದಪ್ಪ ಜೀವಣಗಿ, ನಾಗರಾಜ ಜಮದರಖಾನಿ, ಡಾ. ಸಿದ್ಧಲಿಂಗ ಡಬ್ಬಾ, ಜಗದೀಶ ಮರಪಳ್ಳಿ, ಶಕುಂತಲಾ ಪಾಟೀಲ ಜಾವಳಿ, ಶಿಲ್ಪಾ ಜೋಶಿ, ವಿಶಾಲಾಕ್ಷಿ ಮಾಯಣ್ಣವರ, ವಿಜಯಲಕ್ಷ್ಮೀ ಹಿರೇಮಠ, ಎಸ್ ಎಂ ಪಟ್ಟಣಕರ್, ಹೆಚ್.ಎಸ್.ಬರಗಾಲಿ, ಶಿವಶರಣಪ್ಪ ಹಡಪದ, ಪ್ರಭವ ಪಟ್ಟಣಕರ್, ತ್ರಿವೇಣಿ ಜಾಧವ, ಸೋಮಶೇಖರಯ್ಯಾ ಹೊಸಮಠ, ಮಲ್ಲಿಕಾರ್ಜುನ ಇಬ್ರಾಹಿಂಪುರ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…