ಕಲಬುರಗಿ : ಇಂದು ಪತ್ರಿಕೆ ಮೌಲ್ಯ ಎತ್ತಿ ಹಿಡಿಯಲು ಪತ್ರಕರ್ತರು ಜವ್ದಾರಿಯಿಂದ ಕೆಲಸ ಮಾಡಬೇಕಾಗಿದೆ ಎಂದು ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಅರುಣಕುಮಾರ ಪಾಟೀಲ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಏರ್ಪಡಿಸಿದ ಕಲ್ಯಾಣ ಕಹಳೆ ಮಾಸಿಕ ಪತ್ರಿಕೆಯ ವಾರ್ಷಿಕೋತ್ಸವ ಸಮಾರಂಭ ಹಾಗೂ ಸಾಧಕರಿಗೆ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.
ಆನಸಾಮಾನ್ಯರ ಪ್ರೀತಿ ಮತ್ತು ವಿಶ್ವಾಸದ ಸುದ್ದಿಗಳನ್ನು ಪ್ರಕಟಿಸುವ ಮೂಲಕ ಸಾಮಾಜಿಕ ತತ್ವಾದರ್ಶಗಳು ಎತ್ತಿ ಹಿಡಿಯಬೇಕು. ಜೊತೆಗೆ ಸಾಮಾಜದ ಅಂಕು ಡೊಂಕುಗಳನ್ನು ತಿದ್ದುವ ಬರಹಗಳು ಹರಿತವಾಗಿರಬೇಕು ಎಂದರು.
ಶ್ರೀನಿವಾಸ ಸರಡಗಿಯ ಪೂಜ್ಯ ರೇವಣಸಿದ್ದ ಶಿವಾಚಾರ್ಯರು ಸಾನಿಧ್ಯ ವಹಿಸಿದರು. ಮಾಜಿ ಮಹಾಪೌರ ಸಂತೋಷ ಪಾಟೀಲ ದುಧನಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಉದ್ದಿಮೆದಾರರ ವಿನೋದ ಪಾಟೀಲ ಅತಿಥಿಗಳಾಗಿದ್ದರು. ಕಲ್ಯಾಣ ಕಹಳೆ ಮಾಸ ಪತ್ರಿಕೆಯ ಸಂಪಾದಕ ಶರಣಗೌಡ ಪಾಟೀಲ ಪಾಳಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಲ್ಯಾಣ ಕಹಳೆ ಪ್ರಶಸ್ತಿಯನ್ನು ಪ್ರಭುಲಿಂಗ ನೀಲೂರೆ, ಜಗನ್ನಾಥ ಶೇರಿಕಾರ, ವಿಜಯಕುಮಾರ ಕಲ್ಲಾ, ಆರ್ ಜೆ ವಾಣಿ ಅವರಿಗೆ ಪ್ರದಾನ ಮಾಡಿ ಗೌರವಿಸಲಾಯಿತು. ಬಿ ಎಚ್ ನಿರಗುಡಿ, ಅಂಬಾರಾಯ ಮಡ್ಡೆ, ಶರಣಬಸಪ್ಪ ವಡ್ಡನಕೇರಿ, ಅಂಬಾರಾಯ ಕೋಣೆ, ಬಸವಂತರಾಯ ಕೋಳಕೂರ, ಸಿಪಿಐ ದೌಲತ್ತ, ಚಿಸಿ ನಿಂಗಣ್ಣ, ಆನಂದ ಸಿದ್ದಮಣಿ, ವಿಜಯಕುಮಾರ ಪರುತೆ ಮತ್ತಿತರರಿದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…