ಕಲಬುರಗಿ: ವಕೀಲರು ಹೆಚ್ಚು ಹೆಚ್ಚು ರಾಜಕೀಯಕ್ಕೆ ಬರುವುದರಿಂದ ಸಂಸತ್ತಿನಲ್ಲಿ ರೂಪಿಸಲ್ಪಡುವ ಕಾಯಿದೆಗಳ ಕುರಿತು ಸುದೀರ್ಘ ಚರ್ಚೆಯಲ್ಲಿ ಭಾಗವಹಿಸಿ ಜನಹಿತ ಕಾಪಾಡುವ ಕಾನೂನು ತರಲು ಸಹಕಾರಿಯಾಗುತ್ತದೆ ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರು ಅಭಿಪ್ರಾಯಪಟ್ಟರು.
ವಕೀಲರ ಸಂಘದಲ್ಲಿ ಪ್ರಚಾರ ಸಭೆ ನಡೆಸಿ ಅವರು ಮಾತನಾಡಿ, ತಾವು ವಕೀಲರಾಗಿ ಕಲಬುರಗಿಯಲ್ಲಿ ಜೀವನ ಪ್ರಾರಂಭಿಸಿದ ಬಗ್ಗೆ ಮೆಲುಕು ಹಾಕಿದ ಖರ್ಗೆ ಅವರು ತಮ್ಮ ರಾಜಕೀಯ ವೃತ್ತಿ ಬದುಕಿಗೆ ವಕೀಲಿಗೆ ಮಹತ್ವದ ತಿರುವು ಕೊಟ್ಟಿತ್ತು. ಹಾಗಾಗಿ, ಕಲಬುರಗಿ ಜಿಲ್ಲಾ ವಕೀಲರೆಂದರೆ ತಮಗೆ ವಿಶೇಷ ಪ್ರೀತಿ ಎಂದರು. ಕಲಬುರಗಿ ಹೈಕೋರ್ಟ್ ವ್ಯಾಪ್ತಿಗೆ ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳನ್ನು ಸೇರ್ಪಡಿಸುವ ಕುರಿತು ಚುನಾವಣೆ ನಂತರ ಪರೀಶಿಲನೆ ಮಾಡಲಾಗುವುದು ಎಂದರು. ತಾವು ಚುನಾವಣೆಗೆ ಸ್ಪರ್ಧಿಸಿದ್ದು ಮತ್ತೊಮ್ಮೆ ಆರಿಸಿ ಸಂಸತ್ತಿಗೆ ಕಳಿಸುವಂತೆ ವಕೀಲರಲ್ಲಿ ಮನವಿ ಮಾಡಿದರು.
ವೇದಿಕೆಯ ಮೇಲೆ ವಕೀಲರ ಸಂಘದ ಅಧ್ಯಕ್ಷರಾದ ಆರ್ ಕೆ ಹಿರೇಮಠ, ವಕೀಲರಾದ ಬಿಆರ್ ಪಾಟೀಲ್, ಕಾಶೀನಾಥ್ ಮೋತಕಪಲ್ಲಿ, ಬಾಬುರಾವ್ ಮಂಗಾಣೆ, ಸಂತೋಷ ಪಾಟೀಲ್ ಹಾಗೂ ಮಾರುತಿ ಮಾಲೆ ಸೇರಿದಂತೆ ಮತ್ತಿತರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…