ಕಲಬುರಗಿ: ನೆರೆ ಹಾವಳಿಯಿಂದ ತತ್ತರಿಸಿ ಹೋದ ಕರ್ನಾಟಕ ಭಾಗದ ಅರ್ಧದಷ್ಟು ನಾಡಿನ ಜನತೆಯಲ್ಲಿ ಒಂದಿಷ್ಟು ಧೈರ್ಯ ತುಂಬುವ ದಿಸೆಯಲ್ಲಿ ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ನೇತೃತ್ವದಲ್ಲಿ ಕಲಬುರಗಿಯ ಸಾಂಸ್ಕೃತಿಕ ಬಳಗವೆಲ್ಲ ಸೇರಿ ಹತ್ತಿಗುಡೂರ ಶಾಲಾ ಆವರಣದಲ್ಲಿ ತೆಗೆದ ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ನಿರಾಶ್ರಿತರಿಗೆ ಮೂಲಭೂತ ವಸ್ತುಗಳನ್ನು ಕೊಡುವ ಮೂಲಕ ವಿಶ್ವಜ್ಯೋತಿ ಪ್ರತಿಷ್ಠಾನವು ತನ್ನೆಲ್ಲ ಬಳಗದ ಸಹಕಾರದೊಂದಿಗೆ ನೆರೆ ಸಂತ್ರಸ್ಥರ ನೆರವಿಗೆ ಬಂದರು.
ನಂತರ ಮಾತನಾಡಿದ ಸಂಘಟಕ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಕಷ್ಟದಲ್ಲಿದ್ದವರ ಕಣ್ಣಿರು ಒರೆಸುವುದೇ ಮಾನವೀಯತೆ. ನೈಸರ್ಗೀಕ ವಿಕೋಪಕ್ಕೆ ಬಲಿಯಾದ ಹಳ್ಳಿಗಳಲ್ಲಿನ ಜನರಲ್ಲಿ ಆತ್ಮ ಸ್ಥೈರ್ಯ ತುಂಬುವ ಕಾರ್ಯ ಮಾಡಬೇಕಾಗಿದೆ. ನೊಂದವರ ನೋವಿಗೆ ಸ್ಪಂದಿಸುವುದೇ ನಿಜವಾದ ಸಮಾಜಸೇವೆ ಎಂಬ ನಿಜತತ್ವ ಪ್ರತಿಷ್ಠಾನ ಯಾವತ್ತೂ ಪಾಲಿಸುತ್ತಾ ಬಂದಿದೆ ಎಂದು ಹೇಳಿದರು.
ಪಿಡಿಎ ಇಂಜಿನೀಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಬಾಬುರಾವ ಶೇರಿಕಾರ, ಡಾ.ಸುರೇಶ ಪಾಟೀಲ, ಡಾ.ಗೀತಾ ಪಾಟೀಲ, ಸಾಹಿತ್ಯ ಪ್ರೇಮಿಗಳಾದ ರವೀಂದ್ರಕುಮಾರ ಭಂಟನಳ್ಳಿ, ಜ್ಯೋತಿ ಹಿರೇಮಠ, ಸವಿತಾ ಪಾಟೀಲ, ಸಂಗೀತಾ ರೆಡ್ಡಿ, ಬಿ.ಎಂ.ಪಾಟೀಲ ಕಲ್ಲೂರ, ಶಿವಾನಂದ ಮಠಪತಿ, ಯಾದಗಿರಿ ಜಿಲ್ಲಾ ಚು.ಸಾ.ಪ. ಅಧ್ಯಕ್ಷ ಬಸವರಾಜ ಸಿನ್ನೂರ, ರೈತಪರ ಹೋರಾಟಗಾರ ಮಲ್ಲಿಕಾರ್ಜುನ ಸತ್ಯಂಪೇಟೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…