ಶಾಲಾ ಮಕ್ಕಳಿಂದ ಮತದಾನ ಜಾಗೃತಿ ಜಾಥಾ

ಶಹಾಬಾದ: ಪ್ರಸ್ತುತವಾಗಿ ವಿಧಾನಸಭೆಚುನಾವಣೆ ಆಗಮಿಸಿರುವುದರಿಂದ ಸಾರ್ವಜನಿಕರಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸುವಲ್ಲಿ ಮಕ್ಕಳ ಶ್ರಮದಾನ ಸಾರ್ಥಕಗೊಳಿಸಲು ಸರ್ವರು ಮತದಾನ ಮಾಡಬೇಕು ಎಂದು ಸೇಠ ಗೋವರ್ಧನಲಾಲ ವರ್ಮಾ ಹಿಂದಿ ಪ್ರಾಥಮಿಕ ಶಾಲೆಯ ಮುಖ್ಯಗುರುಮಾತೆ ಅನಿತಾ ಶರ್ಮಾ ಹೇಳಿದರು.

ಅವರು ಶನಿವಾರ ಸೇಠ ಗೋವರ್ಧನಲಾಲ ವರ್ಮಾ ಹಿಂದಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಎಸ್.ಎಸ್.ನಂದಿ ಪ್ರೌಢಶಾಲಾ ಮಕ್ಕಳಿಂದ ನಡೆದ ಮತದಾನ ಜಾಗೃತಿ ಜಾಥಾ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು.

ಮತದಾನ ನಮ್ಮ ಹಕ್ಕು, ಪವಿತ್ರ ಮತದಾನ ನಮ್ಮ ಧ್ಯೇಯವಾಗಬೇಕು. ಅದಕ್ಕೆ ಬೆಲೆ ಕಟ್ಟಬಾರದು. ಅದನ್ನು ಚಲಾಯಿಸುವ ಮೂಲಕ ನಮ್ಮತನವನ್ನು ಕಾಪಾಡಿಕೊಳ್ಳಬೇಕು. ಒಂದು ಉತ್ತಮ ಮತ ಕ್ಷೇತ್ರದ ಅಭಿವೃದ್ಧಿಗೆ ಒಳ್ಳೆ ವ್ಯಕ್ತಿಯನ್ನು ಆಯ್ಕೆ ಮಾಡಬೇಕೆಂದು ಹೇಳಿದರು.

ಶಿಕ್ಷಕ ಬಾಬಾಸಾಹೇಬ ಸಾಳುಂಕೆ ಹಾಗೂ ಚನ್ನಬಸಪ್ಪ ಕೊಲ್ಲೂರ್ ಮಾತನಾಡಿ, ಪ್ರತಿಯೊಬ್ಬ ಮತದಾರರು ಯಾವುದೇ ಹಣ ಹಾಗೂ ಇತರೆ ಆಮಿಷಕ್ಕೆ ಒಳಗಾಗದೆ ಮುಕ್ತವಾಗಿ ಧೈರ್ಯದಿಂದ ಮತಚಲಾಯಿಸಿ. ದೇಶದ ಅಭಿವೃದ್ಧಿ ಹಾಗೂ ಕ್ಷೇತ್ರದ ಅಭಿವೃದ್ಧಿಯ ಜನನಾಯಕರ ಆಯ್ಕೆ ಮಾಡುವಂತೆ ಈ ಬಾರಿ ಶೇ 100ರಷ್ಟು ಮತಚಲಾಯಿಸಿ ಪ್ರಜಾಪ್ರಭುತ್ವದ ಘನತೆ ಎತ್ತಿಹಿಡಿಯುವಂತೆ ಮತದಾರರಲ್ಲಿ ಮನವಿ ಮಾಡಿದರು. ಈ ಬಾರಿ ಚುನಾವಣಾ ಆಯೋಗ ನಿರ್ಧರಿಸಿದಂತೆ 80ವರ್ಷ ಮೇಲ್ಪಟ್ಟ ವೃದ್ಧರಿಗೆ ಹಾಗೂ ವಿಶೇಷಚೇತನರಿಗೆ ಮತಗಟ್ಟೆಗೆ ಹೋಗಿ ಮತಚಲಾಯಿಸಲು ಆಗದೇ ಇದ್ದಲ್ಲಿ ಅಂತವರು ಚುನಾವಣೆ ಅಧಿಕಾರಿಗಳಿಗೆ ಮನವಿ ನೀಡಿದರೆ ಮನೆಗೆ ಬಂದು ಮತ ಚಲಾವಣೆ ಮಾಡಲು ಅವಕಾಶ ನೀಡಲಾಗಿದೆ ಎಂದರು.

ಶಾಲಾ ಮಕ್ಕಳು ಹಾಗೂ ಶಿಕ್ಷಕರ ನೇತೃತ್ವದಲ್ಲಿ ರೇಲ್ವೆ ನಿಲ್ದಾಣ, ಅಂಬೇಡ್ಕರ್ ವೃತ್ತ, ನೆಹರು ವೃತ್ತ, ತ್ರಿಶೂಲ ವೃತ್ತ, ಮಜ್ಜಿದ್ ವೃತ್ತ ಹಾಗೂ ಇತರೆ ಪ್ರದೇಶಗಳಲ್ಲಿ ಸಂಚರಿಸಿದ ಮತದಾನ ಕುರಿತು ನಾನಾ ಘೋಷ್ಯವಾಕ್ಯಗಳನ್ನು ಕೂಗುವ ಮೂಲಕ ಸಾರ್ವಜನಿಕರ ಗಮನ ಸೆಳೆದರು.

ಶಿಕ್ಷಕರಾದ ಸಂಗೀತಾ ಜಾಧವ, ಮಹೇಶ್ವರಿ ಗುಳಿಗಿ, ಲತಾ, ವಿಜಯಲಕ್ಷ್ಮಿ,ರಾಜೇಶ್ವರಿ, ಸಂಗೀತಾ ದೇಶಪಾಂಡೆ, ನೈನಾ ಚಪ್ಪಳಗಾಂವಕರ್,ಉಷಾ ನಂದವಾರ್, ಮಂಜು ಮಾನೆ,ಸುಮಿತ್ರ ದಂಡಗುಲಕರ್,ಸ್ನೇಹಾ ಹಿಬಾರೆ,ಶ್ರೀರಾಮ ಇತರರು ಇದ್ದರು.
ಜಾಥಾ: ನಗರದ ಬಿ.ವಿ.ಎಮ್, ಕೂಡಲಸಂಗಮ, ಸರಕಾರಿ ಬಾಲಕರ ಪ್ರೌಢಶಾಲೆ, ಶಿವಯೋಗಿಸ್ವಾಮಿ, ಮಿನಿರೋಸ್ ಸೇರಿದಂತೆ ಇತರ ಶಾಲಾಮಕ್ಕಳಿಂದ ಜಾಗೃತಿ ಜಾಥಾ ನಡೆಸಲಾಯಿತು.

emedialine

Recent Posts

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

1 hour ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

6 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

6 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

8 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

20 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420