ಶಹಾಬಾದ ತಾಲೂಕಾಧ್ಯಕ್ಷ ಅಬ್ದುಲ್ ಗನಿಗೆ ಸನ್ಮಾನ

0
4

ಶಹಾಬಾದ: ಜಾತ್ಯಾತೀತ ಜನತಾದಳ ಪಕ್ಷದ ಶಹಾಬಾದ ತಾಲೂಕಾಧ್ಯಕ್ಷರನ್ನಾಗಿ ಅಬ್ದುಲ್ ಗನಿ ಸಾಬೀರ ಅವರನ್ನು ನೇಮಕರಾಗಿದಕ್ಕೆ ಅವರಿಗೆ ಜಿಲ್ಲಾ ಜೆಡಿಎಸ್ ಕಾರ್ಯಾಲಯದಲ್ಲಿ ಜೆಡಿಎಸ್ ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಮಹಾಗಾಂವಕರ್ ಹಾಗೂ ಜಿಲ್ಲಾ ಉಪಾಧ್ಯಕ್ಷ ರಘುನಾಥ.ಸಿ.ಗುರುನಾಥ ಅವರು ಸನ್ಮಾನಿಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಮಹಾಗಾಂವಕರ್ ಮಾತನಾಡಿ, ರೈತರ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ.ರಾಜ್ಯದಲ್ಲಿ ಸೋಮಾರಿ ಸರ್ಕಾರವನ್ನು ಕಿತ್ತೊಗೆದು ಜೆಡಿಎಸ್ ಪಕ್ಷಕ್ಕೆ ಅಧಿಕಾರಕ್ಕೆ ತರಬೇಕು.ಕುಮಾಸ್ವಾಮಿಗಳನ್ನು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಿ ಮಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಆ ನಿಟ್ಟಿನಲ್ಲಿ ತಮ್ಮನ್ನು ಜೆಡಿಎಸ್ ಪಕ್ಷದ ಶಹಾಬಾದ ತಾಲೂಕಾಧ್ಯಕ್ಷರನ್ನಾಗಿ ಮಾಡಲಾಗಿದೆ.

Contact Your\'s Advertisement; 9902492681

ತಾವು ಪಕ್ಷ ತತ್ವ ಸಿದ್ದಾಂತಗಳಿಗೆ ಬದ್ಧರಾಗಿ, ಪಕ್ಷ ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು.ಅಲ್ಲದೇ ಮಾಜಿ ಮುಖ್ಯಮಂತ್ರಿ ಕುಮಾಸ್ವಾಮಿ ಅವರ ಯೋಜನೆಗಳು ಹಾಗೂ ಮಾಜಿ ಪ್ರಧಾನಿ ದೇವೆಗೌಡರ ಜನಪರವಾದ ಕೊಡುಗೆಗಳನ್ನು ಜನರಿಗೆ ತಿಳಿಸಬೇಕು.ಪ್ರತಿ ಮನೆಮನೆಗೆ ತೆರಳಿ ಜೆಡಿಎಸ್ ಪಕ್ಷ ರೈತರ ಪರ ಹಾಗೂ ಜನಸಾಮಾನ್ಯರ ಪರವಾಗಿದೆ ಎಂದು ಮನನವಾಗುವಂತೆ ತಿಳಿಸುವ ಮೂಲಕ, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷ ಸಯ್ಯದ್ ಜಫರ್ ಹುಸೇನ್, ಪ್ರಧಾನ ಕಾರ್ಯದರ್ಶಿ ಸಿದ್ದಣ್ಣ ಪಾಟೀಲ, ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಸಮೀರ ಭಾಗವಾನ, ಅಲ್ಪಸಂಖ್ಯಾತರ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಯೂನೂಸಖಾನ ಕೆಟಿಎಸ್, ಜಿ.ಎಸ್.ರೆಹಮತ್,ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಸೀರಾಜ ಶಾಬ್ದಿ, ಜಿಲ್ಲಾ ಉಪಾಧ್ಯಕ್ಷ ರಘುನಾಥ.ಸಿ.ಗುರುನಾಥ, ಮುಸ್ಲಿಂ ಸಮುದಾಯದ ಮುಖಂಡರಾದ ಮತೀನಸೇಠ ಎಮ್‍ಆರ್‍ಎಲ್, ತಾಲೂಕಾ ಯುವ ಘಟಕದ ಅಧ್ಯಕ್ಷ ಮಹ್ಮದ್ ಅಜರ್ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here