ಬಿಸಿ ಬಿಸಿ ಸುದ್ದಿ

ಟಾಂಗಾ ಏರಿ ಮತದಾನ ಜಾಗೃತಿ ಮೂಡಿಸಿದ ಕಲಬುರಗಿ ಡಿಸಿ

ಟಾಂಗಾ ಜಾಥಾಕ್ಕೆ ಚಾಲನೆ: ಕಲಬುರಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಇಂದು ಎಸ್.ವಿ.ಪಿ. ವೃತ್ತದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಟಾಂಗಾ ಜಾಥಾಗೆ ಸ್ವೀಪ್ ಸಮಿತಿಯ ರಾಜ್ಯ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಯಶವಂತ ವಿ.ಗುರುಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ಡಿ. ಬದೋಲೆ, ಸ್ವೀಪ್ ಸಮಿತಿಯ ಸದಸ್ಯರು ಹಾಗೂ ಇತರರು ಹಾಜರಿದ್ದರು.

ಕಲಬುರಗಿ; ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನ ಮಾಡಿಸುವ ನಿಟ್ಟಿನಲ್ಲಿ ಸ್ವೀಪ್ ಚಟುವಟಿಕೆಗಳನ್ನು ವ್ಯಾಪಕವಾಗಿ ಕೈಗೊಳ್ಳಬೇಕೆಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಯಾದ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತ್ರದ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರದಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಸ್ವೀಪ್ ಸಮಿತಿ ಸಭೆಯಲ್ಲಿ ಮಾತನಾಡುತ್ತಾ, ಕಳೆದ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2018ರಲ್ಲಿ ಅತೀ ಕಡಿಮೆ ಮತದಾನವಾದ 10 ನಗರಗಳ ಪೈಕಿ ಬೆಂಗಳೂರ ನಗರ ಮೊದಲನೇ ಸ್ಥಾನದಲ್ಲಿದರೆ ಕಲಬುರಗಿ ನಗರ ಎರಡನೇ ಸ್ಥಾನದಲ್ಲಿದೆ. ಗುಲಬರ್ಗಾ ಉತ್ತರ, ಗುಲಬರ್ಗಾ ದಕ್ಷಿಣ, ಗುಲಬರ್ಗಾ ಗ್ರಾಮೀಣ ಹಾಗೂ ಚಿತ್ತಾಪುರ ಕ್ಷೇತ್ರಗಳಲ್ಲಿ ಕಡಿಮೆ ಮತದಾನವಾಗಿತ್ತು ಎಂದು ಹೇಳಿದರು.

ನಗರ ಪ್ರದೇಶಗಳಲ್ಲಿ ಹೆಚ್ಚಿನ ಸ್ವೀಪ್ ಚಟುವಟಿಕೆ ಕೈಗೊಂಡು ಈ ಬಾರಿ ಶೇಕಡ 75 ಕ್ಕೂ ಹೆಚ್ಚು ಮತದಾನ ಆಗಲು ಮತದಾರರಲ್ಲಿ ಜಾಗೃತಿ ಮೂಡಿಸಬೇಕೆಂದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪೂರ ವಿಧಾನಸಭಾ ಕ್ಷೇತ್ರದ ವಾಡಿ ಮತಗಟ್ಟೆ ಸಂಖ್ಯೆ 159 ರಲ್ಲಿ ಶೇ. 22.72 ಹಾಗೂ ಭಂಕೂರ ಮತಗಟ್ಟೆ ಸಂಖ್ಯೆ 49 ರಲ್ಲಿ ಶೇ. 47.19 ರಷ್ಟು ಜಿಲ್ಲೆಯಲ್ಲೇ ಅತಿ ಕಡಿಮೆ ಮತದಾನವಾಗಿತ್ತು. ಈ ಕ್ಷೇತ್ರದಲ್ಲಿ ಈ ಬಾರಿ ಸಂಚರಿಸಿ, ಮತದಾನ ಕಡಿಮೆಯಾಗಿದ್ದಕ್ಕೆ ಕಾರಣಗಳ ತಿಳಿದುಕೊಂಡು ಹೆಚ್ಚಳಕ್ಕೆ ಕ್ರಮಕೈಗೊಳ್ಳಬೇಕು ಎಂದು ಅವರು ಬಿ.ಎಲ್.ಓ. ಗಳಿಗೆ ಸಲಹೆ ನೀಡಿದರು.

ಮತದಾನ ಕುರಿತ ಜಾಗೃತಿ ವಿಡಿಯೋ ಇನ್ನಿತರ ಮೂಲಕ ಹೆಚ್ಚು ಸ್ವೀಪ್ ಚಟುವಟಿಕೆಗಳನ್ನು ಕೈಗೊಳ್ಳಬೇಕೆಂದು ಕರೆ ನೀಡಿದರು. ವೋಟರ್ ಹೆಲ್ಪಲೈನ್ ಆ್ಯಪ್ ಡೌನ್‍ಲೋಡ್ ಮಾಡಿಕೊಂಡರೆ, ಅದರಲ್ಲಿ ಮತದಾರರ ವಿವರ, ಅಭ್ಯರ್ಥಿಗಳ ವಿವರ ಮುಂತಾದವು ದೊರೆಯಲಿದ್ದು, ಈ ವೋಟರ್ ಹೆಲ್ಪಲೈನ್ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಬೇಕೆಂದರು.

ಬಿ.ಎಲ್.ಓ.ಗಳು ಜನರ ನೇರ ಸಂಪರ್ಕ ಅಧಿಕಾರಿಗಳಾಗಿರುವುದರಿಂದ ಜನರಿಗೆ ಮತದಾನ ಮಾಡುವಂತೆ ಅರಿವು ಮೂಡಿಸುವ ಜವಾಬ್ದಾರಿ ತಮ್ಮ ಮೇಲೆ ಹೆಚ್ಚಿದೆ ಎಂದರು.

ಜಿಲ್ಲಾ ಪಂಚಾಯತ್ ಸಿ.ಇ.ಓ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಗಿರೀಶ್ ಡಿ. ಬದೋಲೆ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಬಾರಿ ಮತದಾನ ಪ್ರಮಾಣ ಶೇ.63 ಮಾತ್ರ ಇದ್ದು,. ಈ ಬಾರಿ ಹೆಚ್ಚಿಸಲು ಸಮಿತಿಯಿಂದ ವಿವಿಧ ಜಾಗೃತಿ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಮೇಣದಬತ್ತಿ ಮೆರವಣಿಗೆ, ಕಲಾವಿದರ ಮೂಲಕ ಚಟುವಟಿಕೆಗಳು, ಸೈಕಲ್ ರ್ಯಾಲಿ, ಬೈಕ್ ರ್ಯಾಲಿ, ರಂಗೋಲಿ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಮುಂತಾದ ಸ್ವೀಪ್ ಚಟುವಟಿಕೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಸದಸ್ಯರು ಹಾಗೂ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago