ಶಹಾಬಾದ :ನಗರದಲ್ಲಿ ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟಿ ಬೆಳೆಸಿದ ನಮ್ಮನ್ನು ಹಾಗೂ ಮುಖಂಡರನ್ನು ಕಡೆಗಣಿಸಲಾಗುತ್ತಿರುವುದರಿಂದ ನಾನು ಹಾಗೂ ಕಳೆದ ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಸೇರಿಕೊಂಡು ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೆವೆ ಎಂದು ಜೆಡಿಎಸ್ ಪಕ್ಷದ ಮಾಜಿ ಅಧ್ಯಕ್ಷ ರಾಜ ಮಹ್ಮದ್ ರಾಜಾ ತಿಳಿಸಿದ್ದಾರೆ.
ಅವರು ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನಾದ್ಯಂತ ಸುಮಾರು 30 ವರ್ಷಗಳ ಕಾಲ ಜೆಡಿಎಸ್ ಪಕ್ಷವನ್ನು ಸಂಘಟನೆ ಮಾಡಿ ಕಟ್ಟಿ ಬೆಳೆಸಿ ಇಂದು ಪಕ್ಷಕ್ಕೆ ರಾಜೀನಾಮೆ ನೀಡಿದ್ದು ಪಕ್ಷ ಬಿಡಲು ನೋವಾಗುತ್ತಿದೆ. ಯಾರದೋ ಮಾತು ಕೇಳಿ ನನ್ನನು ಹಾಗೂ ನಮ್ಮ ಮುಖಂಡರನ್ನು ಕಡೆಗಣಿಸುತ್ತಿದ್ದಾರೆ.
ಇತ್ತಿಚ್ಚಿಗೆ ಕಾರ್ಯಕರ್ತರನ್ನು ನಡೆಸಿಕೊಳ್ಳುವ ರೀತಿ ಮತ್ತು ಭಿನ್ನಾಭಿಪ್ರಾಯದಿಂದ ಕಳೆದ ಬಾರಿಯ ಜೆಡಿಎಸ್ ಘಟಕದ ಪದಾಧಿಕಾರಿಗಳು ಸೇರಿಕೊಂಡು ಪಕ್ಷಕ್ಕೆ ಸಾಮೂಹಿಕವಾಗಿ ರಾಜೀನಾಮೆ ಪತ್ರ ಬರೆದು ಜಿಲ್ಲಾಧ್ಯಕ್ಷರಿಗೆ ಸಲ್ಲಿಸಿದ್ದೆವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.