ಶಹಾಬಾದ: ವಿವಿಧ ಪಕ್ಷದ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

0
12

ಶಹಾಬಾದ: ಬಿಜೆಪಿ ಸರಕಾರ ಕೈಕೊಂಡ ಜನೋಪಯೋಗಿ ಕಾರ್ಯಗಳನ್ನು ಮೆಚ್ಚಿ ಅನ್ಯ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿಗೆ ಸೇರುತ್ತಿರುವುದು ಮತ್ತಷ್ಟು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ಶಾಸಕ ಬಸವರಾಜ ಮತ್ತಿಮಡು ಹೇಳಿದರು.
ಅವರು ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ನೂರಾರು ಯುವಕರು ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡು ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು ಮತ್ತೊಮ್ಮೆ ಡಬ್ಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Contact Your\'s Advertisement; 9902492681

ಬಿಜೆಪಿ ಪಕ್ಷದಲ್ಲಿ ಪ್ರತಿಯೊಬ್ಬ ಕಾರ್ಯಕರ್ತರಿಗೂ ಸಿಗಬೇಕಾದ ಎಲ್ಲಾ ಗೌರವ ಸಿಗುತ್ತದೆ ಪಕ್ಷಕ್ಕೆ ಸೇರ್ಪಡೆಯಾದ ತಕ್ಷಣ ನಾವೆಲ್ಲರೂ ಬಿಜೆಪಿಗರು, ಹೊಸಬರು ಹಳಬರು ಎಂದು ಭೇದಭಾವ ಇಲ್ಲದೇ ಪಕ್ಷ ಸಂಘಟನೆ ಮತ್ತು ಪಕ್ಷ ನೀಡುವ ಜವಾಬ್ದಾರಿಯನ್ನ ಸರಿಯಾಗಿ ನಿಭಾಯಿಸಬೇಕು ಎಂದರು.

ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ ಮಾತನಾಡಿ, ನಮ್ಮ ಶಾಸಕ ಬಸವರಾಜ ಮತ್ತಿಮಡು ಅವರ ಜನೋಪಯೋಗಿ ಕಾರ್ಯಗಳನ್ನು ಮೆಚ್ಚಿ ಅವರ ಸಮ್ಮುಖದಲ್ಲಿ ನೂರಾರು ಯುವಕರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾದರು.

ಅರುಣ ಪಟ್ಟಣಕರ, ಅನಿಲ ಬೋರಗಾಂವಕರ, ಚಂದ್ರಕಾಂತ ಗೊಬ್ಬೂರಕರ್,ಮಹಾದೇವ ಗೊಬ್ಬೂರಕರ್, ದುರ್ಗಪ್ಪ ಪವಾರ, ಸದಾನಂದ ಕುಂಬಾರ, ಸಿದ್ರಾಮ ಕುಸಾಳೆ,ನಾಗರಾಜ ಮೇಲಗಿರಿ, ಕನಕಪ್ಪ ದಂಡಗುಲಕರ, ನಿಂಗಪ್ಪ ಹುಳಗೋ¼ಕರ್,ದತ್ತಾ ಫಂಡ್, ಬಸವರಾಜ ಬಿರಾದಾರ, ದಿನೇಶ ಗೌಳಿ, ವಿರೇಶ ಬಂದಳ್ಳಿ, ದೇವೆಂದ್ರಪ್ಪ ಯಲಗೋಡಕರ್, ರಾಜು ದಂಡಗುಲಕರ್,ರಾಜು ಕುಂಬಾರ,ಶಂಕರ ಕುಂಬಾರ ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here