ಶಹಾಬಾದ: ವಿವಿಧ ಪಕ್ಷದ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಶಹಾಬಾದ: ಬಿಜೆಪಿ ಸರಕಾರ ಕೈಕೊಂಡ ಜನೋಪಯೋಗಿ ಕಾರ್ಯಗಳನ್ನು ಮೆಚ್ಚಿ ಅನ್ಯ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿಗೆ ಸೇರುತ್ತಿರುವುದು ಮತ್ತಷ್ಟು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ಶಾಸಕ ಬಸವರಾಜ ಮತ್ತಿಮಡು ಹೇಳಿದರು.
ಅವರು ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ನೂರಾರು ಯುವಕರು ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡು ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು ಮತ್ತೊಮ್ಮೆ ಡಬ್ಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಪಕ್ಷದಲ್ಲಿ ಪ್ರತಿಯೊಬ್ಬ ಕಾರ್ಯಕರ್ತರಿಗೂ ಸಿಗಬೇಕಾದ ಎಲ್ಲಾ ಗೌರವ ಸಿಗುತ್ತದೆ ಪಕ್ಷಕ್ಕೆ ಸೇರ್ಪಡೆಯಾದ ತಕ್ಷಣ ನಾವೆಲ್ಲರೂ ಬಿಜೆಪಿಗರು, ಹೊಸಬರು ಹಳಬರು ಎಂದು ಭೇದಭಾವ ಇಲ್ಲದೇ ಪಕ್ಷ ಸಂಘಟನೆ ಮತ್ತು ಪಕ್ಷ ನೀಡುವ ಜವಾಬ್ದಾರಿಯನ್ನ ಸರಿಯಾಗಿ ನಿಭಾಯಿಸಬೇಕು ಎಂದರು.

ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ ಮಾತನಾಡಿ, ನಮ್ಮ ಶಾಸಕ ಬಸವರಾಜ ಮತ್ತಿಮಡು ಅವರ ಜನೋಪಯೋಗಿ ಕಾರ್ಯಗಳನ್ನು ಮೆಚ್ಚಿ ಅವರ ಸಮ್ಮುಖದಲ್ಲಿ ನೂರಾರು ಯುವಕರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾದರು.

ಅರುಣ ಪಟ್ಟಣಕರ, ಅನಿಲ ಬೋರಗಾಂವಕರ, ಚಂದ್ರಕಾಂತ ಗೊಬ್ಬೂರಕರ್,ಮಹಾದೇವ ಗೊಬ್ಬೂರಕರ್, ದುರ್ಗಪ್ಪ ಪವಾರ, ಸದಾನಂದ ಕುಂಬಾರ, ಸಿದ್ರಾಮ ಕುಸಾಳೆ,ನಾಗರಾಜ ಮೇಲಗಿರಿ, ಕನಕಪ್ಪ ದಂಡಗುಲಕರ, ನಿಂಗಪ್ಪ ಹುಳಗೋ¼ಕರ್,ದತ್ತಾ ಫಂಡ್, ಬಸವರಾಜ ಬಿರಾದಾರ, ದಿನೇಶ ಗೌಳಿ, ವಿರೇಶ ಬಂದಳ್ಳಿ, ದೇವೆಂದ್ರಪ್ಪ ಯಲಗೋಡಕರ್, ರಾಜು ದಂಡಗುಲಕರ್,ರಾಜು ಕುಂಬಾರ,ಶಂಕರ ಕುಂಬಾರ ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

17 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

10 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420