ಕಲಬುರಗಿ: ಮಾಜಿ ಶಾಸಕ ದಿ. ಚಂದ್ರಶೇಖರ ಪಾಟೀಲ್ ರೇವೂರ ಕಂಡ ಕನಸು ನನಸಾಗಿದ್ದು, ಔಷಧ ಮಾರಾಟ ಪ್ರತಿನಿಧಿಗಳು, ಔಷಧ ವ್ಯಾಪಾರಸ್ಥರು ಮತ್ತು ಔಷಧ ಮಳಿಗೆಗಳಲ್ಲಿ ಕೆಲಸ ಮಾಡುತ್ತಿರುವ ಕುಟುಂಬದ ಸದಸ್ಯರುಗಳಿಗೆ ಮುಂದಿನ ದಿನಗಳಲ್ಲಿ ಔಷಧ ಭವನದ ಪ್ರಯೋಜನೆ ಪಡೆದುಕೊಳ್ಳಬೇಕು ಎಂದು ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ್ ಹೇಳಿದರು.
ಇಲ್ಲಿನ ರಾಮಮಂದಿರ ಸಮೀಪದ ದರಿಯಾಪುರ ಬಡಾವಣೆಯಲ್ಲಿ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದಿಂದ ಚಂದ್ರಶೇಖರ ಪಾಟೀಲ್ ಸ್ಮಾರಕ ಔಷಧ ಭವನ ಉದ್ಘಾಟಿಸಿ ಅವರು ಮಾತನಾಡಿದರು.
ವೈದ್ಯಕೀಯ, ಆರೋಗ್ಯ ಕ್ಷೇತ್ರ ಸಂಬಂಧಿ ವೃತ್ತಿ ಜನರೊಂದಿಗೆ ಸಾರ್ವಜನಿಕರಿಗೂ ಕೈಗೆಟಕುವ ದರದಲ್ಲಿ ಔಷಧ ಭವನ ಬಳಸಿಕೊಳ್ಳಬಹುದು ಎಂದು ಸಲಹೆ ನೀಡಿದರು.
ಇದೇ ವೇಳೆಗೆ ದಾನಿಗಳು, ಜಿಲ್ಲಾ ಸಂಘದ ಮಾಜಿ ಅಧ್ಯಕ್ಷರು, ಕಾರ್ಯದರ್ಶಿ ಸೇರಿ ಎಲ್ಲ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಬಿಲ್ಡಿಂಗ್ ಕಮೀಟಿ ಚೇರ್ಮನ್ ಮಲ್ಲಿಕಾರ್ಜುನ ಗಂಗಾ ಅವರನ್ನು ಸನ್ಮಾನಿಸಲಾಯಿತು.
ಪ್ರಮುಖರಾದ ರವೀಂದ್ರ ಜೋಶಿ, ವಿಜಯಕುಮಾರ ಹವಾಲ್ದಾರ, ಸೈಯದ್ ನಿಜಾಮೋದ್ದಿನ್ ಚಿಸ್ತಿ, ಪ್ರಹ್ಲಾದ್ ಪೂಜಾರಿ, ಧನಂಜಯ ಪುರಿ, ಮೌಜಮಅಲಿ, ರಶೀದ್ ದಂಡೋತಿ, ಶ್ರೀಕಾಂತ ಗಂಗಾ, ಸಂತೋಷ ಕುಲಕರ್ಣಿ, ಡಾ. ಇಮ್ರಾನ್ ಅಹ್ಮದ್, ರಾಮಕೃಷ್ಣ ದೇಶಪಾಂಡೆ ಮತ್ತಿತರರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…