13ಕ್ಕೆ ಎಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ವಾಲಿ ನಾಮಪತ್ರ ಸಲ್ಲಿಕೆ

0
15

ಅ‍ಳಂದ : ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ  ಏಪ್ರಿಲ್ 13 ರಂದು ಮಧ್ಯಾಹ್ನ 2 ಘಂಟೆಗೆ   ನಾಮಪತ್ರ ಸಲ್ಲಿಸುತ್ತೇನೆ ಎಂದು ಜೆಡಿಎಸ್ ಅಭ್ಯರ್ಥಿ ಮಹೇಶ್ವರಿ ವಾಲಿ ತಿಳಿಸಿದ್ದಾರೆ.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾಮಪತ್ರ ಸಲ್ಲಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗಮಿಸಲಿದ್ದಾರೆ.ಮೂರು–ನಾಲ್ಕು ಶಾಸಕರು ಬರಲಿದ್ದಾರೆ. ಸುಮಾರು 20 ರಿಂದ 25 ಸಾವಿರಕ್ಕೂ ಅಧಿಕ ಜನ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದರು.

Contact Your\'s Advertisement; 9902492681

ಕ್ಷೇತ್ರದಲ್ಲಿ ಬಹಳಷ್ಟು ಜನರು ಸಕರಾತ್ಮಕವಾಗಿ ಸ್ಪಂದಿಸುತ್ತಿದ್ದು, ಗೆಲ್ಲುವ ಭರವಸೆ ಇದೆ ಎಂದರು.ನಾಮಪತ್ರ ಸಲ್ಲಿಸುವ ಮೊದಲು ಶ್ರೀರಾಮ ಮಾರುಕಟ್ಟೆ  ಬಹಿರಂಗ ಸಮಾವೇಶವನ್ನು ಆಯೋಜಿಸಲಾಗಿದೆ ಎಂದರು.

ಈ ಸಮಾವೇಶ ದಲ್ಲಿ ರಾಜ್ಯಾದ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ರಾಜ್ಯ ,ಜಿಲ್ಲಾ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು, ಮಹಿಳೆಯರು ಮತ್ತಿತರರು ಭಾಗವಹಿಸುವರು.ಸುದ್ದಿಗೋಷ್ಠಿಯಲ್ಲಿ ಶರಣು ಕುಲಕರ್ಣಿ ಮತ್ತಿತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here