ಬಿಸಿ ಬಿಸಿ ಸುದ್ದಿ

ಜೇವರ್ಗಿ: ಜೆಡಿಎಸ್ ಸೇರ್ತಾರಾ ಮಾಜಿ ಶಾಸಕ ದೊಡ್ಡಪ್ಪಗೌಡ?

  • ಡಾ.ಅಶೋಕ ದೊಡ್ಮನಿ ಜೇವರ್ಗಿ

ಜೇವರ್ಗಿ: ಕ್ಷೇತ್ರದ ಬಿಜೆಪಿ ಟಿಕೆಟ್ ತಪ್ಪಿದ್ದಕ್ಕೆ ಜೇವರ್ಗಿ ಪಟ್ಟಣದಲ್ಲಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಬೋಳರವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ರಾಜಕೀಯ ನಿಂತ ನೀರಲ್ಲ. ಇಲ್ಲಿ ಯಾರೂ ಶತ್ರುಗಳಲ್ಲ ಹಾಗೆ ಮಿತ್ರರೂ ಕೂಡ ಅಲ್ಲ. ಅದರಂತೆ ಮಾಜಿ ಶಾಸಕರು ತಮ್ಮ ಬೆಂಬಲಿಗರ ಸಭೆಯನ್ನು ಬುಧುವಾರ ಬೆಳಿಗ್ಗೆ 11.30ಕ್ಕೆ ಕರೆದಿದ್ದಾರೆ.

ನಿಜವಾಗಲೂ ಈ ಚುನಾವಣೆ ಅವರ ಕುಟುಂಬದ ಅಸ್ತಿತ್ವದ ಪ್ರಶ್ನೆಯಾಗಿದೆ. ಬಿಜೆಪಿಗೆ ಪಾಠ ಕಲಿಸಲು ಇದು ಸಕಾಲ. ಹಾಗೆ ನೋಡಿದರೆ ಬಿಜೆಪಿ ಈ ಕುಟುಂಬಕ್ಕೆ ಬಹಳಷ್ಟು ಅನ್ಯಾಯ ಮಾಡಿದೆ. ಮಾಜಿ ಸಿಎಂ ಧರ್ಮಸಿಂಗ್ ಅವರಿಗೆ ಸೋಲಿಸಿ ವಿಧಾನಸಭೆ ಪ್ರವೇಶಿಸಿದರೆ ಮಂತ್ರಿ ಸ್ಥಾನ ಕೊಡಬೇಕಿತ್ತು. ಯಾವುದು ಕೊಡಲಿಲ್ಲ.

ನಂತರ ಬಿಜೆಪಿ ಗ್ರಾಮಾಂತರ ಅಧ್ಯಕ್ಷರಾಗಿ ಇಡೀ ಜಿಲ್ಲೆಯನ್ನು ಸುತ್ತಿ ಚಿತ್ತಾಪುರದಲ್ಲಿ ದಿ.ವಾಲ್ಮೀಕಿ ನಾಯಕˌ ಶಾಸಕ ಬಸವರಾಜ ಮತ್ತಿಮೂಡ ಸೇರಿದಂತೆ ಹಲವು ಶಾಸಕರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಆಗಲೂ ಇವರ ಶ್ರಮಕ್ಕೆ ಬಿಜೆಪಿ ಸರ್ಕಾರ ಯಾವುದೇ ಫಲ ಕೊಡಲಿಲ್ಲ.

ಈಗ ಬಿಜೆಪಿ ಟಿಕೆಟ್ ತಪ್ಪಿಸುವುದರ ಮೂಲಕ ಮತ್ತೊಮ್ಮೆ ಈ ಕುಟುಂಬಕ್ಕೆ ಅನ್ಯಾಯ ಮಾಡಲಾಗಿದೆ.

ಕಲಬುರಗಿ ದಕ್ಷಿಣ ಮತಕ್ಷೇತ್ರದ ಟಿಕೆಟ್ ತಪ್ಪಿದ್ದಕ್ಕಾಗಿ ಶ್ರೀಮತಿ ಅರುಣಾ ಸಿ ಪಾಟೀಲ ರೇವೂರ ಜೆಡಿಎಸ್ ಗೆ ಹೋಗಿ ಗೆದ್ದು ತೋರಿಸಿದ್ದರು. ಬಹುಶ ದೊಡ್ಡಪ್ಪಗೌಡರಿಗೂ ಸಹ ಇದು ಸಕಾಲ.

ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳಿ ಓಕೆ ಎಂದರೆ ಜೆಡಿಎಸ್ ಟಿಕೆಟ್ ಕೊಡಲು ಮಾಜಿ ಸಿಎಂ ಕುಮಾರಸ್ವಾಮಿ ತುದಿಗಾಲಲ್ಲಿ ನಿಂತಿದ್ದಾರೆ. ಹೆಚ್ಚು ಕಡಿಮೆ ಕುಮಾರಸ್ವಾಮಿ ಮಾತು ಕೂಡ ಆಡಿರ್ತಾರೆ.

ದೊಡ್ಡಪ್ಪಗೌಡ ಪಾಟೀಲ ಜೆಡಿಎಸ್ ಸೇರಿದ್ರೆ ಜೇವರ್ಗಿ ಮತಕ್ಷೇತ್ರದ ಅಸಲಿ ಆಟ ಆಗ ಶುರುವಾಗುತ್ತದೆ.

emedialine

Recent Posts

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀಕುಟುಂಬಕ್ಕೆ ಒಂದೆಡೆ ದುಃಖ, ತಳವಳ, ಕಳವಳ, ಸಂಕಟ, ಮತ್ತೊಂದೆಡೆಸಂತಸ,…

26 mins ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

14 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

14 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

16 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

16 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

16 hours ago