ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಭ್ಯಾರ್ಥಿಯನ್ನು ಕಣಕ್ಕಿಳಿಸುತ್ತಿಲ್ಲ

0
29

ಸುರಪುರ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ದಿಂದ ಸುರಪುರ ಮತಕ್ಷೇತ್ರದಲ್ಲಿ ಯಾವುದೇ ಅಭ್ಯಾರ್ಥಿಯನ್ನು ಕಣಕ್ಕಿಳಿಸುತ್ತಿಲ್ಲ ಎಂದು ಪಕ್ಷದ ಮುಖಂಡ ಮಲ್ಲಿಕಾರ್ಜುನರೆಡ್ಡಿ ಅಮ್ಮಾಪುರ ತಿಳಿಸಿದರು.

ಈ ಕುರಿತು ನಗರದಲ್ಲಿ ಹೇಳಿಕೆ ನೀಡಿರುವ ಅವರು,ಈಗಾಗಲೇ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳ ಅಭ್ಯಾರ್ಥಿಗಳು ಜಿದ್ದಾ ಜಿದ್ದಿನ ರಾಜಕಾರಣ ಮಾಡುತ್ತಿದ್ದು,ಕ್ಷೇತ್ರದಲ್ಲಿ ಒಂದು ರೀತಿಯ ಭಯದ ವಾತಾವರಣ ಸೃಷ್ಟಿಯಾಗುತ್ತಿದೆ.ಆದ್ದರಿಂದ ನಮ್ಮ ಪಕ್ಷದ ಸಂಸ್ಥಾಪಕರು ಹಾಗೂ ನಮ್ಮ ನಾಯಕರಾದ ಗಾಲಿ ಜನಾರ್ಧರೆಡ್ಡಿಯವರ ನಿರ್ದೇಶನದಂತೆ ಕ್ಷೇತ್ರದಲ್ಲಿ ಯಾವುದೇ ಅಭ್ಯಾರ್ಥಿಯನ್ನು ಕಣಕ್ಕಿಳಿಸದೆ ಸೂಕ್ತ ಅಭ್ಯಾರ್ಥಿಗೆ ನಮ್ಮ ಪಕ್ಷದಿಂದ ಬೆಂಬಲಿಸುವ ಕುರಿತು ಶೀಘ್ರದಲ್ಲಿಯೇ ನಮ್ಮೆಲ್ಲ ಮುಖಂಡರ,ಕಾರ್ಯಕರ್ತರ ಹಾಗೂ ಗಾಲಿ ಜನಾರ್ಧನರೆಡ್ಡಿಯವರ ಅಭಿಮಾನಿಗಳ ಸಭೆ ನಡೆಸಿ ಸೂಕ್ತ ನಿರ್ಧಾರವನ್ನು ಪ್ರಕಟಿಸುವುದಾಗಿ ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here